ಶಿವಮೊಗ್ಗ: ನಗರದ ವಿವಿಧೆಡೆ ಕಾಂಗ್ರೆಸ್ ನಿಂದ 'ಪೆಟ್ರೋಲ್ 100 ನಾಟ್ ಔಟ್' ಪ್ರತಿಭಟನೆ

Update: 2021-06-11 06:14 GMT

ಶಿವಮೊಗ್ಗ, ಜೂ.11: ಪೆಟ್ರೋಲ್, ಡೀಸೆಲ್ ಬೆಲೆಯೇರಿಕೆಯನ್ನು ಖಂಡಿಸಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್, ಯುವ ಕಾಂಗ್ರೆಸ್ ವತಿಯಿಂದ ಶಿವಮೊಗ್ಗ ನಗರದ 5ಕ್ಕೂ ಹೆಚ್ಚು ಪೆಟ್ರೋಲ್ ಬಂಕ್ ಎದುರು ಶುಕ್ರವಾರ ಪ್ರತಿಭಟನೆ ನಡೆಯಿತು.

ನಗರದ ನಂದಿ ಪೆಟ್ರೋಲ್ ಬಂಕ್ ಎದುರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸುಂದರೇಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆದರೆ, ಯುವ ಕಾಂಗ್ರೆಸ್ ಕಾರ್ಯಕರ್ತರು ದುರ್ಗಿಗುಡಿ ಪೆಟ್ರೋಲ್ ಬಂಕ್ ಎದುರು 'ನರೇಂದ್ರ ಮೋದಿ ನಾಟ್ ಔಟ್, ಅಚ್ಚೇ ದಿನ್ ಆಗಯಾ' ಎಂದು ತಮಟೆ ಬಡಿದು ವಿನೂತನವಾಗಿ ಪ್ರತಿಭಟನೆ ನಡೆಸಿದರು.

 ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನಕುಮಾರ್, ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್ ನೇತೃತ್ವದಲ್ಲೂ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು,  ಪೆಟ್ರೋಲ್-ಡೀಸೆಲ್ ದರ ಇಳಿಸುವಂತೆ ಒತ್ತಾಯಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News