ಖಜಾನೆ ಇಲಾಖೆಯ ಹಿರಿಯ ಅಧಿಕಾರಿ ಫಯಾಝ್ ಅಹ್ಮದ್ ಕೋವಿಡ್‍ ನಿಂದ ನಿಧನ

Update: 2021-06-11 16:51 GMT

ಚಿಕ್ಕಮಗಳೂರು, ಜೂ.11: ಚಿಕ್ಕಮಗಳೂರು ಜಿಲ್ಲಾ ಖಜಾನೆ ಇಲಾಖೆಯಲ್ಲಿ ಸಹಾಯಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ಹಿರಿಯ ಅಧಿಕಾರಿ ಫಯಾಝ್ ಅಹ್ಮದ್(54) ಕೊರೋನ ಸೋಂಕಿನಿಂದ ನಿಧನರಾಗಿದ್ದಾರೆ.

ಕಳೆದ ಕೆಲ ವರ್ಷಗಳಿಂದ ನಗರದಲ್ಲಿರುವ ಖಜಾನೆ ಇಲಾಖೆಯ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಫಯಾಝ್ ಅಹ್ಮದ್ ಅವರಿಗೆ ಇತ್ತೀಚೆಗೆ ಕೊರೋನ ಸೋಂಕು ತಗಲಿತ್ತು. ನಗರದ ಕೆಆರ್‍ಎಸ್ ಆಸ್ಪತ್ರೆಯಲ್ಲಿ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದ ಅವರ ಸ್ಥಿತಿ ಗುರುವಾರ ಗಂಭೀರವಾಗಿದ್ದರಿಂದ ಕುಟುಂಬಸ್ಥರು ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಿದ್ದರು. ಆದರೆ ಶುಕ್ರವಾರ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ.

ಮೂಲತಃ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಗೋರಾಪುರ ಗ್ರಾಮದವರಾಗಿದ್ದ ಫಯಾಜ್ ಅಹ್ಮದ್ ಮಿಲಿಟರಿಯಲ್ಲಿ ಸೇವೆ ಸಲ್ಲಿಸಿದ್ದು, ನಂತರ ಕಂದಾಯ ಇಲಾಖೆಯಲ್ಲಿ ಸೇವೆಗೆ ಸೇರಿದ್ದರು. ಖಜಾನೆ ಇಲಾಖೆಯಲ್ಲಿ ತುಮಕೂರು, ಉಡುಪಿ, ಮಂಗಳೂರಿನಲ್ಲಿ ಕೆಲಸ ನಿರ್ವಹಿಸಿದ್ದ ಅವರು ಇತ್ತೀಚೆಗೆ ಚಿಕ್ಕಮಗಳೂರು ಜಿಲ್ಲೆಗೆ ವರ್ಗಾವಣೆಗೊಂಡು ನಗರದ ಖಜಾನೆ ಇಲಾಖೆಯ ಕಚೇರಿಯಲ್ಲಿ ಸಹಾಯಕ ನಿರ್ದೇಶಕರಾಗಿದ್ದ ಸೇವೆ ಸಲ್ಲಿಸುತ್ತಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News