ಮಾರಕಾಸ್ತ್ರಗಳಿಂದ ಕೊಚ್ಚಿ ಯೂಟ್ಯೂಬ್ ಚಾನಲ್ ಸಂಪಾದಕನ ಕೊಲೆ

Update: 2021-06-11 17:12 GMT

ಬೆಳಗಾವಿ, ಜೂ.11: ಯೂಟ್ಯೂಬ್ ಚಾನಲ್ ಸಂಪಾದಕರಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಹತ್ಯೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಚುನಿಮಟ್ಟಿ ಗ್ರಾಮದಲ್ಲಿ ನಡೆದಿದೆ.

ಮೃತನನ್ನು ಮೂಡಲಗಿ ತಾಲೂಕಿನ ಚುನಿಮಟ್ಟಿ ಗ್ರಾಮದ ಶಿವಾನಂದ ಕಚ್ಯಾಗೋಳ(32) ಎಂದು ಗುರುತಿಸಲಾಗಿದೆ. ಈತ ಮೂಡಲಗಿ ತಾಲೂಕಿನಲ್ಲಿ ಯೂಟ್ಯೂಬ್ ಚಾನಲ್ ಸಂಪಾದಕನಾಗಿ ಕೆಲಸ ಮಾಡುತ್ತಿದ್ದನು. ಗುರುವಾರ ತಡರಾತ್ರಿ ಅಪರಿಚಿತ ದುಷ್ಕರ್ಮಿಗಳು ಮನೆಯ ಪಕ್ಕದಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಯೂಟ್ಯೂಬ್ ಚಾನಲ್ ಸಂಪಾದಕನ ಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಕೊಲೆಯಾದ ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಘಟಪ್ರಭಾ ಪೊಲಿಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News