ರಾಜ್ಯದಲ್ಲಿ ಕೋವಿಡ್ ಪಾಸಿಟಿವ್ ಪ್ರಮಾಣ ಇಳಿಕೆ: ಇಂದು 6,835 ಮಂದಿಗೆ ಸೋಂಕು ದೃಢ

Update: 2021-06-14 17:01 GMT

ಬೆಂಗಳೂರು, ಜೂ.14: ರಾಜ್ಯದಲ್ಲಿ ಸೋಮವಾರ 6,835 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. 120 ಜನರು ಸೋಂಕಿಗೆ ಬಲಿಯಾಗಿದ್ದು, 15,409 ಜನರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 27,71,969ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 33,033ಕ್ಕೆ ತಲುಪಿದೆ.

ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 1,72,141ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.

120 ಸೋಂಕಿತರು ಬಲಿ: ಬಾಗಲಕೋಟೆ 2, ಬಳ್ಳಾರಿ 6, ಬೆಳಗಾವಿ 5, ಬೆಂಗಳೂರು ಗ್ರಾಮಾಂತರ 3, ಬೆಂಗಳೂರು ನಗರ 12, ಚಿಕ್ಕಬಳ್ಳಾಪುರ 2, ಚಿಕ್ಕಮಗಳೂರು 2, ಚಿತ್ರದುರ್ಗ 1, ದಕ್ಷಿಣ ಕನ್ನಡ 6, ದಾವಣಗೆರೆ 10, ಧಾರವಾಡ 10, ಹಾಸನ 3, ಹಾವೇರಿ 5, ಕಲಬುರಗಿ 1, ಕೊಡಗು 3, ಕೋಲಾರ 3, ಕೊಪ್ಪಳ 2, ಮಂಡ್ಯ 3, ಮೈಸೂರು 25, ರಾಯಚೂರು 2, ಶಿವಮೊಗ್ಗ 6, ತುಮಕೂರು 3, ಉಡುಪಿ 2, ಉತ್ತರ ಕನ್ನಡ 1, ವಿಜಯಪುರ 1, ಯಾದಗಿರಿ ಜಿಲ್ಲೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ.

ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 6,835 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಾಗಲಕೋಟೆ 57, ಬಳ್ಳಾರಿ 203, ಬೆಳಗಾವಿ 191, ಬೆಂಗಳೂರು ಗ್ರಾಮಾಂತರ 168, ಬೆಂಗಳೂರು ನಗರ 1,470, ಬೀದರ್ 14, ಚಾಮರಾಜನಗರ 119, ಚಿಕ್ಕಬಳ್ಳಾಪುರ 160, ಚಿಕ್ಕಮಗಳೂರು 185, ಚಿತ್ರದುರ್ಗ 195, ದಕ್ಷಿಣ ಕನ್ನಡ 648, ದಾವಣಗೆರೆ 200, ಧಾರವಾಡ 103, ಗದಗ 28, ಹಾಸನ 507, ಹಾವೇರಿ 63, ಕಲಬುರಗಿ 31, ಕೊಡಗು 110, ಕೋಲಾರ 115, ಕೊಪ್ಪಳ 95, ಮಂಡ್ಯ 256, ಮೈಸೂರು 670, ರಾಯಚೂರು 33, ರಾಮನಗರ 26, ಶಿವಮೊಗ್ಗ 353, ತುಮಕೂರು 386, ಉಡುಪಿ 122, ಉತ್ತರ ಕನ್ನಡ 204, ವಿಜಯಪುರ 103, ಯಾದಗಿರಿ ಜಿಲ್ಲೆಯಲ್ಲಿ 20 ಪ್ರಕರಣಗಳು ಪತ್ತೆಯಾಗಿವೆ.

ರಾಜಧಾನಿಯಲ್ಲಿ 12 ಜನರು ಸಾವು

ರಾಜಧಾನಿಯಲ್ಲಿ ಸೋಮವಾರದಂದು 1,470 ಜನರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, 12 ಜನರು ಮೃತಪಟ್ಟಿದ್ದಾರೆ. 2,409 ಸೋಂಕಿತರು ಬಿಡುಗಡೆಯಾಗಿದ್ದಾರೆ.

ನಗರದಲ್ಲಿ ಇಲ್ಲಿಯವರೆಗೆ ಒಟ್ಟು 11,98,158 ಕೊರೋನ ಸೋಂಕಿತರು ದೃಢಪಟ್ಟಿದ್ದು, ಒಟ್ಟು 15,319 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಒಟ್ಟು 10,97,794 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳಲ್ಲಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News