ಅಂಗೈಯಲ್ಲಿ ಆಕಾಶ ತಂದುಕೊರುವ ಭರವಸೆ ನೀಡಿದ ಬಿಜೆಪಿ: ಯೋಗೀಶ್ ಶೆಟ್ಟಿ ಆರೋಪ

Update: 2021-06-15 16:02 GMT

ಕಾಪು : ಜನರಿಗೆ ಅಂಗೈಯಲ್ಲಿ ಆಕಾಶವನ್ನು ತಂದು ಕೊಡುವ ಭರವಸೆ ಬಿಜೆಪಿ ನೀಡಿತ್ತು. ಆದರೆ ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಡಳಿತ ನಡೆಸುತ್ತಿದ್ದರೂ ಜನ ವಿರೋಧಿಯಾಗಿ ಕಾರ್ಯ ನಿರ್ವಹಿಸುತ್ತಿದೆ. ಇದರಿಂದ ಜನರ ಬದುಕುವ ಹಕ್ಕನ್ನು ಕಸಿದುಕೊಂಡಂತಾಗುತ್ತದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ ಬಾಲಾಜಿ ಹೇಳಿದರು. 

ಅವರು ಮಂಗಳವಾರ ಕಾಪುವಿನಲ್ಲಿ ಕರೆದು ಸುದ್ಧಿಗೋಷ್ಠಿಯಲ್ಲಿ ಮಾತನಾಡಿ, ತೈಲ ಬೆಲೆ ಏರಿಕೆಯಿಂದ ಜನರ ಜೀವನ ದುಸ್ತರ ವಾಗಿದೆ. ಮೂಲ ಬೆಲೆಗಿಂತ ಎರಡು ಪಟ್ಟು ಹೆಚ್ಚು ತೆರಿಗೆ ವಿಧಿಸಿ, ತೈಲೋತ್ಪನ್ನಗಳನ್ನು ಮರಾಟ ಮಾಡುವ ಮೂಲಕ ಕೇಂದ್ರ ಮತ್ತು ರಾಜ್ಯ ಸರಕಾರಗಳು ಜನರ ಜೀವನವನ್ನು ಹಿಂಡುತ್ತಿವೆ ಎಂದು ಆರೋಪಿಸಿದರು. 

ಕೇಂದ್ರ ಸರಕಾರ ಪ್ರತೀಯೊಬ್ಬರಿಗೂ ಉಚಿತ ಲಸಿಕೆ ನೀಡಲು ಕ್ರಮ ತೆಗೆದುಕೊಳ್ಳಬೇಕಿದೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ದಿನವಹಿ ಲಸಿಕೆ ವಿತರಣೆ, ಆರೋಗ್ಯ ಸಂಬಂಧಿ ಸೌಲಭ್ಯಗಳನ್ನು ಒದಗಿಸಬೇಕಿದೆ ಎಂದು ಆಗ್ರಹಿಸಿದರು. 

ಜೆಡಿಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯರಾಮ ಆಚಾರ್ಯ, ಪ್ರಮುಖರಾದ ಶೇಖರ ಪೂಜಾರಿ, ಪ್ರದೀಪ್ ಪೂಜಾರಿ, ಪ್ರಶಾಂತ್ ಮಡಿವಾಳ, ರವಿಚಂದ್ರ ಶೆಟ್ಟಿ, ಪ್ರಭಾಕರ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News