ಮಲೆನಾಡಿನಲ್ಲಿ ಮುಂದುವರಿದ ಮಳೆಯಬ್ಬರ
Update: 2021-06-16 04:52 GMT
ಚಿಕ್ಕಮಗಳೂರುಮ ಜೂ.16: ಮಲೆನಾಡಲ್ಲಿ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಳೆಯ ಅಬ್ಬರ ಬುಧವಾರವೂ ಮುಂದುವರಿದಿದೆ.
ಚಿಕ್ಕಮಗಳೂರು, ಮೂಡಿಗೆರೆ, ಕೊಪ್ಪ, ಶೃಂಗೇರಿ, ಎನ್.ಆರ್.ಪುರ ತಾಲೂಕುಗಳಲ್ಲಿ ನಿನ್ನೆಯಿಂದ ಧಾರಾಕಾರ ಮಳೆ ಸುರಿಯುತ್ತಿದೆ.
ಮೂಡಿಗೆರೆಯ ಚಾರ್ಮಾಡಿ ಘಾಟ್, ಕೊಟ್ಟಿಗೆಹಾರ, ಬಾಳೂರಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಕಾಫಿನಾಡಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ.
ನಿರಂತರ ಮಳೆಯಿಂದ ಭದ್ರಾ, ತುಂಗಾ, ಹೇಮಾವತಿ ನದಿಗಳಲ್ಲಿ ನೀರಿನ ಹರಿವು ಹೆಚ್ಚಳಗೊಂಡಿದೆ. ಮಲೆನಾಡಿನ ಕೆಲ ಭಾಗದಲ್ಲಿ ವಿದ್ಯುತ್ ಸಂಪರ್ಕ ವ್ಯತ್ಯಯಗೊಂಡಿದೆ.