ಕಲ್ಲಡ್ಕ: ಇಂಧನ ತೈಲ ಬೆಲೆಯೇರಿಕೆ ವಿರೋಧಿಸಿ ಎಸ್ ಡಿಪಿಐ ಪ್ರತಿಭಟನೆ

Update: 2021-06-16 06:07 GMT

ವಿಟ್ಲ, ಜೂ.16: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಗೋಳ್ತಮಜಲು ಗ್ರಾಮ ಸಮಿತಿಯ ವತಿಯಿಂದ ಕೇಂದ್ರ ಸರ್ಕಾರದ ತೈಲ ಏರಿಕೆಯ ವಿರುದ್ಧ ಬುಧವಾರ ಕಲ್ಲಡ್ಕ ಜಂಕ್ಷನ್ ನಲ್ಲಿ ಪ್ರತಿಭಟನೆ ನಡೆಯಿತು.

ಗೋಳ್ತಮಜಲು ಗ್ರಾಮ ಸಮಿತಿ ಅಧ್ಯಕ್ಷ ಜವಾಝ್ ಕಲ್ಲಡ್ಕ ನೇತೃತ್ವದಲ್ಲಿ ನಡದ ಈ ಪ್ರತಿಭಟನೆಯಲ್ಲಿ ಗೋಳ್ತಮಜಲು ಗ್ರಾಮ ಪಂಚಾಯತ್ ಸದಸ್ಯರಾದ ಯೂಸುಫ್ ಹೈದರ್, ಇಕ್ಬಾಲ್ ಕೆ.ಸಿ.ರೋಡ್, ಹಾರಿಸ್ ಅಮರ್, ಎಸ್ಡಿಪಿಐ ಬಂಟ್ವಾಳ ತಾಲೂಕು ಕ್ಷೇತ್ರ ಸಮಿತಿಯ ಸದಸ್ಯರಾದ ಸತ್ತಾರ್ ಕಲ್ಲಡ್ಕ ಮೊದಲಾದವರು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News