ಉಳ್ಳಾಲ: ಇಂಧನ ದರ ಏರಿಕೆ ವಿರೋಧಿಸಿ ಎಸ್ ಡಿಪಿಐ ಪ್ರತಿಭಟನೆ

Update: 2021-06-16 13:54 GMT

ಉಳ್ಳಾಲ: ಕೇಂದ್ರ ಸರ್ಕಾರ ಪೆಟ್ರೋಲ್ ದರ ಏರಿಕೆ ಮಾಡಿರುವುದನ್ನು ವಿರೋಧಿಸಿ ಎಸ್ ಡಿಪಿಐ ವತಿಯಿಂದ ತಲಪಾಡಿ, ಸೋಮೇಶ್ವರ ಪುರಸಭೆ ಹಾಗೂ ಕೋಟೆ ಕಾರ್ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಬುಧವಾರ ಪ್ರತಿಭಟನೆ ನಡೆಯಿತು.

ಪ್ರತಿಭಟನಾ ಸಭೆಯಲ್ಲಿ ಎಸ್ ಡಿಪಿಐ ಕೋಟೆಕಾರ್ ಪಟ್ಟಣ ಪಂಚಾಯಿತಿ ಸಮಿತಿ ಅಧ್ಯಕ್ಷ ಇರ್ಷಾದ್ ಅಜ್ಜಿ ನಡ್ಕ ಸರ್ಕಾರ ದ ಜನ ವಿರೋಧಿ ನೀತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಗ್ರಾ.ಪಂ. ಸದಸ್ಯ ಇಸ್ಮಾಯಿಲ್ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಆಡಳಿತ ವೈಫಲ್ಯಗಳನ್ನು ಖಂಡಿಸಿದರು.

ಇಮ್ರಾನ್ ಪೂವಣ್ಣು, ತಲಪಾಡಿ ಗ್ರಾ.ಪಂ.ಸದಸ್ಯ ಇಸ್ಮಾಯಿಲ್, ಅಬ್ದುಲ್ ರಹಿಮಾನ್, ಬಶೀರ್ ಅಜ್ಜಿನಡ್ಕ, ಮೊಯ್ದಿನ್ ಕುಂಞಿ ಉಚ್ಚಿಲ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News