ಸಂಸ್ಥೆಯ ಸಿಬ್ಬಂದಿಗಳಿಗೆ ಆಹಾರ ಕಿಟ್, ಗೌರವಧನ ವಿತರಿಸಿದ ಕಾಜೂರು ಆಡಳಿತ ಸಮಿತಿ

Update: 2021-06-16 14:32 GMT

ಬೆಳ್ತಂಗಡಿ; ರಹ್ಮಾನಿಯಾ ಜುಮ್ಮಾ ಮಸ್ಜಿದ್ ಮತ್ತು ದರ್ಗಾ ಶರೀಫ್ ಕಾಜೂರ್ ಇದರ ವತಿಯಿಂದ, ಕೋವಿಡ್ ಸಂಕಷ್ಟಕ್ಕೆ ಸಿಲುಕಿದ ಸಂಸ್ಥೆಯ ಸಿಬ್ಬಂದಿಗಳಿಗೆ ಆಹಾರ ಸಾಮಾಗ್ರಿಗಳ ಕಿಟ್,‌ ಸ್ಯಾನಿಟೈಸರ್ ಮತ್ತು ಗೌರವಧನವನ್ನು ಮಂಗಳವಾರ ವಿತರಿಸಲಾಯಿತು. ಕೋವಿಡ್ ಸೋಂಕಿತರ ಕುಟುಂಬಗಳಿಗೂ ಅಗತ್ಯ ವಸ್ತುಗಳ ಕಿಟ್ ನೀಡಲಾಯಿತು.

ಅಧ್ಯಕ್ಷತೆ ವಹಿಸಿದ್ದ ಕಾಜೂರು ಆಡಳಿತ ಸಮಿತಿ ಅಧ್ಯಕ್ಷ ಕೆ. ಯು ಇಬ್ರಾಹಿಂ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಯ್ಯದ್ ಕಾಜೂರ್ ತಂಙಳ್ ದುಆ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಆಡಳಿತ ಸಮಿತಿ ಪದಾಧಿಕಾರಿಗಳು, ಸದಸ್ಯರುಗಳು , ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಕಾಜೂರ್ ಜಮಾಅತ್ ವ್ಯಾಪ್ತಿಯ ಎಸ್ಸೆಸ್ಸೆಫ್  ಯುವಕರು ತಾಲೂಕು ಮುಸ್ಲಿಂ ಜಮಾಅತ್ ನೇತೃತ್ವದ 'ಸಹಾಯ್' ಕೋವಿಡ್ ತಂಡದಲ್ಲಿ ಗುರುತಿಸಿಕೊಂಡು ಕೋವಿಡ್‌ನಿಂದ ಮೃತಪಟ್ಟವರ ದಫನ, ಮೆಡಿಸಿನ್, ತುರ್ತು ಸಂದರ್ಭದಲ್ಲಿ ಆಸ್ಪತ್ರೆ ಮುಂತಾದ ಹಲವು ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು ಅವರ ಕಾರ್ಯವನ್ನು ಸ್ಲಾಘಿಸಿ ಅವರಿಗೆ ಆಹಾರ ಸಾಮಾಗ್ರಿಯ ಕಿಟ್ ನೀಡಿ ಶಾಲು ಹೊದಿಸಿ ಸನ್ಮಾನಿಸಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News