ವಿಠಲ ಕಾವ
Update: 2021-06-16 15:46 GMT
ಉಡುಪಿ: ನಗರದ ಕಪ್ಪೆಟ್ಟು ಗ್ರಾಮೀಣ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ ವಿಠಲಕಾವ (66) ಇಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಇವರು ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.
ವಿಠಲ ಕಾವ ಇವರು ಉಡುಪಿ ಕರ್ನಾಟಕ ಕಾಂಗ್ರೆಸ್ ಪಕ್ಷ, ಕರ್ನಾಟಕ ವಿಕಾಸ ಪಕ್ಷ ಹಾಗೂ ಉಡುಪಿ ಬ್ಲಾಕ್ ಕಾಂಗ್ರೆಸ್ನಲ್ಲಿ ಪದಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಅಲ್ಲದೆ ಇವರು ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಅವರ ಕಟ್ಟಾ ಬೆಂಬಲಿಗರಾಗಿದ್ದರು.