ಉಡುಪಿ : ವಿದೇಶಕ್ಕೆ ತೆರಳುವವರಿಗೆ ಪ್ರಮಾಣ ಪತ್ರ ನೀಡಲು ಅಧಿಕಾರಿಗಳ ನೇಮಕ

Update: 2021-06-17 12:12 GMT

ಉಡುಪಿ, ಜೂ.17: ರಾಜ್ಯ ಸರಕಾರದ ನಿರ್ದೇಶನದಂತೆ ಜಿಲ್ಲೆಯಿಂದ ವಿದ್ಯಾಭ್ಯಾಸ, ನೌಕರಿಗೆ ಹಾಗೂ ಇತರ ಯಾವುದೇ ಉದ್ದೇಶಗಳಿಗಾಗಿ ವಿದೇಶಗಳಿಗೆ ತೆರಳುವವರಿಗೆ ಲಸಿಕೆ ಪಡೆಯಲು ಅಗತ್ಯವಿರುವ ಅನುಬಂಧ-4 ರಲ್ಲಿ ಸ್ವಯಂ ಘೋಷಣಾ ಪತ್ರವನ್ನು ನೀಡಲು ದೃಢೀಕರಿಸುವ ಅಧಿಕಾರಿಯಾಗಿ ದೇವರಾಜು ಅರಸು ಹಿಂದುಳಿದ ವರ್ಗಗಳ ಕಲ್ಯಾಣ ನಿಗಮದ ಜಿಲ್ಲಾ ವ್ಯವಸ್ಥಾಪಕ ಮಂಜು (ಮೊ.ನಂ:8277734612) ಇವರನ್ನು ನೇಮಿಸಲಾಗಿದೆ.

ಅಲ್ಲದೇ ಈಗಾಗಲೇ ಮೊದಲನೇ ಡೋಸ್ ಲಸಿಕೆ ಪಡೆಯುವಾಗ ನೋಂದಣಿಗಾಗಿ ಪಾಸ್‌ಪೋರ್ಟ್ ನಂಬರನ್ನು ಬಳಸದೇ ಲಸಿಕೆ ಪಡೆದಿದ್ದರೆ ಅಂತಹ ಫಲಾನುಭವಿಗಳಿಗೆ ಕೋವಿಶೀಲ್ಡ್‌ನ ಎರಡನೇ ಡೋಸ್ ಲಸಿಕಾಕರಣ ಕ್ಕಾಗಿ ಅನುಬಂಧ-5ರಲ್ಲಿ ಲಸಿಕಾ ಪ್ರಮಾಣ ಪತ್ರ ನೀಡಲು ದೃಢೀಕರಿಸುವ ಅಧಿಕಾರಿಯಾಗಿ ಜಿಲ್ಲಾಧಿಕಾರಿಗಳ ತಾಂತ್ರಿಕ ಸಹಾಯಕರು ಹಾಗೂ ಪದನಿಮಿತ್ತ ಭೂದಾಖಲೆಗಳ ಉಪನಿರ್ದೇಶಕ ರವೀಂದ್ರ (ಮೊ.ನಂ: 8660523556) ಇವರನ್ನು ನಗರದ ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಶೆಟ್ಟಿ) ಆಸ್ಪತ್ರೆ ಯಲ್ಲಿ ನೇಮಕ ಮಾಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News