ಆಹಾರದ ಕಿಟ್ ವಿತರಿಸಿ ಮಗಳ ಹುಟ್ಟುಹಬ್ಬವನ್ನು ಆಚರಿಸಿದ ಶಿವಮೊಗ್ಗದ ದಂಪತಿ

Update: 2021-06-17 12:28 GMT

ಶಿವಮೊಗ್ಗ,ಜೂ.17: ಕೊರೋನ ಸಂಕಷ್ಟ ಕಾಲದಲ್ಲಿ ಮಗಳ ಜನ್ಮ ದಿನವನ್ನು ವಿಭಿನ್ನ ರೀತಿಯಲ್ಲಿ ಆಚರಿಸಿದ ದಂಪತಿಗಳ ಕಾರ್ಯ ಮೆಚ್ಚುಗೆಗೆ ಪಾತ್ರವಾಗಿದೆ.

ಉದ್ಯಮಿ ಹಾಗೂ ಹಿರಿಯ ಪತ್ರಕರ್ತ ಗೋಪಾಲ ಎಸ್. ಯಡಗೆರೆ ಮತ್ತು ಲತಾ ದಂಪತಿ ತಮ್ಮ ಮಗಳು ಅನನ್ಯಳ ಹುಟ್ಟು ಹಬ್ಬದ ನಿಮಿತ್ತ ಪತ್ರಿಕಾ ವೃತ್ತಿಯಲ್ಲಿರುವವರಿಗೆ ಮತ್ತು ಬಡವರಿಗೆ ಆಹಾರ ಕಿಟ್ ನೀಡುವುದರ ಮೂಲಕ ಕಷ್ಟದಲ್ಲಿದ್ದವರಿಗೆ ನೆರವಿನ ಹಸ್ತ ಚಾಚಿದ್ದಾರೆ.

ಮಗಳು ಅನನ್ಯ ಹುಟ್ಟು ಹಬ್ಬದಂದು ಸುಮಾರು 40 ಮಂದಿಗೆ ಆಹಾರ ಕಿಟ್ ವಿತರಣೆ ಮಾಡಿದರು. ಕೊರೋನ ಸಂಕಷ್ಟಕ್ಕೆ ಮಿಡಿದ ದಂಪತಿಗಳ ಕಾರ್ಯ ಮೆಚ್ಚುಗೆಗೆ ಪಾತ್ರವಾಗಿದೆ. ಮಗಳ ಹುಟ್ಟು ಹಬ್ಬದ ಸಂಭ್ರಮಾಚರಣೆಯ ಬದಲು ಅದರ ಹಣದಲ್ಲಿ ಕೊರೋನ ಲಾಕ್ ಡೌನ್ ನಿಂದಾಗಿ ತೊಂದರೆಗೆ ಸಿಲುಕಿದವರಿಗೆ ಆಹಾರದ ಕೀಟಗಳನ್ನು ನೀಡುವುದರ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಸಾಗರ ರಸ್ತೆಯಲ್ಲಿರುವ ಜಿ.ಆರ್. ಎಂಟರ್ ಪ್ರೈಸಸ್ ಸಂಸ್ಥೆಯ ಕಚೇರಿ ಆವರಣದಲ್ಲಿ ಗುರುವಾರ ನಡೆದ ಸರಳ ಸಮಾರಂಭದಲ್ಲಿ ಆಹಾರ ಕಿಟ್ ವಿತರಣೆ ಸಮಾರಂಭ ನಡೆಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News