ಶಿವಮೊಗ್ಗ: ವಿದೇಶಕ್ಕೆ ತೆರಳುವವರಿಗೆ ತುಂಗಾನಗರ ಪ್ರಸೂತಿ ಆರೋಗ್ಯ ಕೇಂದ್ರದಲ್ಲಿ ಲಸಿಕೆ ವ್ಯವಸ್ಥೆ

Update: 2021-06-17 12:31 GMT

ಶಿವಮೊಗ್ಗ, ಜೂ.17: ವಿವಿಧ ಕಾರಣಗಳಿಗಾಗಿ ವಿದೇಶಕ್ಕೆ ತೆರಳಲು ಉದ್ದೇಶಿಸಿರುವವರಿಗೆ ಶಿವಮೊಗ್ಗ ನಗರದ ತುಂಗಾನಗರ ಪ್ರಸೂತಿ ಆರೋಗ್ಯ ಕೇಂದ್ರದಲ್ಲಿ ಕೋವಿಡ್ ಲಸಿಕೆ ವ್ಯವಸ್ಥೆ ಮಾಡಲಾಗಿದೆ.

ವಿದ್ಯಾಭ್ಯಾಸ, ಉದ್ಯೋಗ, ಕ್ರೀಡಾ ಚಟುವಟಿಕೆ ಸೇರಿದಂತೆ ಯಾವುದೇ ಕಾರಣಗಳಿಗಾಗಿ ವಿದೇಶಕ್ಕೆ ತೆರಳ ಬಯಸುವವರು ಸಂಬಂಧಿಸಿದ ದಾಖಲೆಗಳನ್ನು ಜಿಲ್ಲಾಧಿಕಾರಿ ಕಚೇರಿಯಲ್ಲಿ ತೋರಿಸಿ, ನಿಗದಿತ ನಮೂನೆಯಲ್ಲಿ ಜಿಲ್ಲಾಧಿಕಾರಿ ಅವರ ಸಹಿಯನ್ನು ಪಡೆದುಕೊಂಡು ಲಸಿಕೆ ಪಡೆಯಬಹುದಾಗಿದೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News