ಯಡಮೊಗೆ ಉದಯ್ ಗಾಣಿಗ ಕೊಲೆ ಪ್ರಕರಣ: ಇಬ್ಬರು ಆರೋಪಿಗಳು ಪೊಲೀಸ್ ಕಸ್ಟಡಿಗೆ

Update: 2021-06-17 15:57 GMT

ಕುಂದಾಪುರ, ಜೂ.17: ಯಡಮೊಗೆ ಉದಯ್ ಗಾಣಿಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಐವರ ಪೈಕಿ ಪ್ರಮುಖ ಇಬ್ಬರು ಆರೋಪಿಗಳನ್ನು ಕುಂದಾಪುರದ ನ್ಯಾಯಾಲಯ ಹೆಚ್ಚಿನ ತನಿಖೆಗಾಗಿ ಎರಡು ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

ಪೊಲೀಸರ ಪರ ಕಾನೂನು ಅಧಿಕಾರಿ (ಕಿರಿಯ) ಮಮ್ತಾಝ್ ಸಲ್ಲಿಸಿದ ಅರ್ಜಿ ಯನ್ನು ಪರಿಗಣಿಸಿದ ಕುಂದಾಪುರ ಒಂದನೇ ಹೆಚ್ಚುವರಿ ಸಿವಿಲ್ ಜಡ್ಜ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶೆ ನಾಗರತ್ನಮ್ಮ ಆದೇಶದಂತೆ ಆರೋಪಿಗಳಾದ ಗ್ರಾಪಂ ಅಧ್ಯಕ್ಷ ಪ್ರಾಣೇಶ್ ಯಡಿಯಾಳ ಹಾಗೂ ರಾಜೇಶ್ ಭಟ್ ನನ್ನು ಪೊಲೀಸರು ಜೂ.18ರ ಸಂಜೆಯವರೆಗೆ ಹೆಚ್ಚಿನ ತನಿಖೆಗೆ ಕಸ್ಟಡಿಗೆ ಪಡೆದುಕೊಂಡಿದ್ದಾರೆ.

ಜೂ.5ರಂದು ರಾತ್ರಿ ಉದಯ್ ಗಾಣಿಗರನ್ನು ಆರೋಪಿಗಳು ಕಾರು ಢಿಕ್ಕಿ ಹೊಡೆಸಿ, ದೊಣ್ಣೆಯಿಂದ ಹೊಡೆದು ಕೊಲೆ ಮಾಡಿರುವ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಈ ಪ್ರಕರಣದಲ್ಲಿ ಬಂಧಿತರಾಗಿರುವ ಉಳಿದ ಮೂವರು ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News