ಕಾರ್ಕಳ: ಇಂಧನ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

Update: 2021-06-17 16:36 GMT

ಕಾರ್ಕಳ : ಇಂಧನ ಬೆಲೆ ಏರಿಕೆ ವಿರುದ್ಧ ಮಂಜರ್ಪಲ್ಕೆ ಶ್ರೀದೇವಿ ಪೆಟ್ರೋಲ್ ಪಂಪ್ ಎದುರುಗಡೆ ಕಾಂಗ್ರೆಸ್ ಪ್ರತಿಭಟನೆ ನಡೆಸಿತು.

ಬ್ಲಾಕ್ ಕಾಂಗ್ರೆಸ್ ಕಾರ್ಕಳ ಬೋಳ ಕೆದಿಂಜೆ ಗ್ರಾಮೀಣ ಕಾಂಗ್ರೆಸ್ ಸಮಿತಿ ಹಾಗು  ಯುವ ಕಾಂಗ್ರೆಸ್ ವತಿಯಿಂದ ಕೇಂದ್ರ ಸರಕಾರದ  ಪೆಟ್ರೋಲ್, ಡೀಸೆಲ್ ಬೆಲೆಯೇರಿಕೆ ವಿರುದ್ಧ ಮಂಜರಪಲ್ಕೆಯ ಶ್ರೀ ದೇವಿ ಪೆಟ್ರೋಲ್ ಪಂಪ್ ನ ಎದುರು ಗುರುವಾರ ಸಾಂಕೇತಿಕ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯನ್ನುದ್ದೇಶಿಸಿ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸದಾಶಿವ ದೇವಾಡಿಗ, ಬೋಳ ಕೆದಿಂಜೆ ಗ್ರಾಮೀಣ ಸಮಿತಿ ಅಧ್ಯಕ್ಷರಾದ ಅವಿನಾಶ್ ಮಲ್ಲಿ ಸೇವಾದಳದ ಅಧ್ಯಕ್ಷರಾದ ಸುಶಾಂತ್ ಸುಧಾಕರ್ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ದೀಪಕ್ ಕೋಟ್ಯಾನ್ ಕಾರ್ಕಳ ಯುವ ಕಾಂಗ್ರೆಸ್  ಕಾರ್ಯದರ್ಶಿ ಪ್ರದೀಪ್ ಬೇಲಾಡಿ ಮಾತನಾಡಿದರು.

ಪ್ರತಿಭಟನಾ ಸಭೆಯಲ್ಲಿ ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ರವಿಶಂಕರ್ ಶೇರಿಗಾರ್ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಪ್ರಭಾಕರ ಬಂಗೇರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಯೋಗೀಶ್ ನಯನ್ ಇನ್ನಾ, ಬೋಳ ಗ್ರಾಮ ಪಂಚಾಯಿತಿ ಸದಸ್ಯರಾದ ಯೋಗೇಶ್ ಮೂಲ್ಯ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಪ್ರವೀಣ್ ಸಾಲ್ಯಾನ್, ಕಾಂತಾವರ ಕಾಂಗ್ರೆಸ್ ಸ್ಥಾನೀಯ ಸಮಿತಿಯ ಅಧ್ಯಕ್ಷರಾದ ಸಂದೀಪ್ ಅಡ್ಯಂತ್ಯಾಯ, ಸಂತೋಷ್ ದೇವಾಡಿಗ, ಬೋಳ ನಿರಂಜನ್ ಕೆದಿಂಜೆ ಯುವ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಅಧ್ಯಕ್ಷ ಪವನ್ ಕುಮಾರ್, ಕಾರ್ಕಳ ಐ.ಟಿ ಸೆಲ್ ಅಧ್ಯಕ್ಷರಾದ ಸತೀಶ್ ಕಾರ್ಕಳ ಮತ್ತು ಬೋಳ ಕೆದಿಂಜೆ ಗ್ರಾಮೀಣ ಸಮಿತಿಯ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಪಾಲ್ಗೊಂಡಿದ್ದರು.

ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಸುಪ್ರೀತ್ ಶೆಟ್ಟಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಬೊಳ ಕೆದಿಂಜೆ ಗ್ರಾಮೀಣ ಸಮಿತಿ ಅಧ್ಯಕ್ಷ ಅವಿನಾಶ್ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News