ನಂದಿಗ್ರಾಮದಲ್ಲಿ ಸುವೇಂದು ಅಧಿಕಾರಿ ಗೆಲುವು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

Update: 2021-06-17 16:59 GMT

ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಮೊದಲು ಮಮತಾ ಬ್ಯಾನರ್ಜಿ ನಂದಿಗ್ರಾಮ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದರು ಎಂದು ಘೋಷಿಸಲಾಗಿತ್ತು. ಬಳಿಕ ಫಲಿತಾಂಶದಲ್ಲಿ ಬದಲಾವಣೆಯುಂಟಾಗಿ ಸುವೇಂದು ಅಧಿಕಾರಿ ನಂದಿಗ್ರಾಮದಲ್ಲಿ ಜಯಿಸಿದ್ದಾರೆ ಎಂದು ಘೋಷಿಸಲಾಗಿತ್ತು. ಈ ಕುರಿತಾದಂತೆ ಮಮತಾ ಬ್ಯಾನರ್ಜಿ ಕೋಲ್ಕತ್ತ ಹೈಕೋರ್ಟ್ ಮೆಟ್ಟಿಲೇರಿದ್ದಾರೆಂದು ತಿಳಿದು ಬಂದಿದೆ.

ಈ ಕುರಿತು ndtv.com  ವರದಿ ಮಾಡಿದೆ. ಫಲಿತಾಂಶ ಮರುಪ್ರಕಟವಾದ ಬೆನ್ನಲ್ಲೇ, "ಈಗ ಈ ಕುರಿತು ಪ್ರತಿಕ್ರಿಯಿಸುವುದಿಲ್ಲ. ನಾನು ನ್ಯಾಯಾಲಯದಲ್ಲಿ ಈ ಗೆಲುವನ್ನು ಪ್ರಶ್ನಿಸುತ್ತೇನೆ" ಎಂದು ಮಮತಾ ಬ್ಯಾನರ್ಜಿ ಹೇಳಿಕೆ ನೀಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News