×
Ad

ಉಡುಪಿ ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ; ಅಗತ್ಯ, ತುರ್ತು ಚಟುವಟಿಕೆ ಹೊರತು ಜನರ ಸಂಚಾರ ನಿಷೇಧ: ಡಿಸಿ ಜಗದೀಶ್

Update: 2021-06-18 18:58 IST

ಉಡುಪಿ, ಜೂ.18 : ಕೋವಿಡ್ -19 ನಿಯಂತ್ರಣ ಹಿನ್ನೆಲೆಯಲ್ಲಿ ವಿಧಿಸ ಲಾಗಿರುವ ವಾರಾಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ 7 ಗಂಟೆಯಿಂದ ಸೋಮ ವಾರ ಬೆಳಿಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿದ್ದು, ಈ ಅವಧಿಯಲ್ಲಿ ಅಗತ್ಯ ಮತ್ತು ತುರ್ತು ಚಟುವಟಿಕೆಗಳಿಗೆ ಹೊರತುಪಡಿಸಿ ಜನರ ಓಡಾಟಗಳನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

ಈ ಅವಧಿಯಲ್ಲಿ ಸರಕಾರಿ ಕಚೇರಿಗಳು ಕಾರ್ಯನಿರ್ವಹಿಸಲಿದ್ದು, ಎಲ್ಲಾ ವೈದ್ಯಕೀಯ ಸೇವೆಗಳು(ಆಸ್ಪತ್ರೆಗಳು, ನಸಿರ್ಂಗ್ ಹೋಂಗಳು, ಕ್ಲಿನಿಕ್ಸ್, ಕ್ಲಿನಿಕಲ್ ಲ್ಯಾಬ್ಸ್ ಔಷಧಾಲಯಗಳು, ಜನ ಔಷಧಿ ಕೇಂದ್ರಗಳು, ರಕ್ತ ಸಂಗ್ರಹ ಕೇಂದ್ರಗಳು, ರೋಗಿಗಳು ಮತ್ತು ಅವರ ಪರಿಚಾರಕರು ಮತ್ತು ವ್ಯಾಕ್ಸಿನೇಷನ್ ತೆಗೆದುಕೊಳ್ಳುವವರು), ಅವಶ್ಯಕ ಸೇವೆಗಳನ್ನು ಪೂರೈಸುವ ಮತ್ತು ದಿನದ 24ಗಂಟೆ ಸಮಯಾವಧಿಯಲ್ಲಿ ಕಾರ್ಯ ಚರಿಸಬೇಕಾಗಿರುವ ಕೈಗಾರಿಕೆಗಳು, ದೂರವಾಣಿ ಹಾಗೂ ಅಂತರ್ಜಾಲ ಸೇವೆಯನ್ನು ಪೂರೈಸುವ ನೌಕರರು ಹಾಗೂ ವಾಹನಗಳು ಕಾರ್ಯ ಚರಿಸಲು ಅನುಮತಿಸಲಾಗಿದೆ. ರೆಸ್ಟೋರೆಂಟ್‌ಗಳಲ್ಲಿ ಆಹಾರಗಳನ್ನು ತೆಗೆದುಕೊಂಡು ಹೋಗಲು ಮತ್ತು ಹೋವ್ ಡೆಲಿವರಿ ಅವಕಾಶ ಕಲ್ಪಿಸಲಾಗಿದೆ.

ಬೆಳಿಗ್ಗೆ 6ರಿಂದ ಅಪರಾಹ್ನ 2 ಗಂಟೆಯವರೆಗೆ ಆಹಾರ, ದಿನಸಿ, ಹಣ್ಣುಗಳು ಮತ್ತು ತರಕಾರಿಗಳು, ಮಾಂಸ ಮತ್ತು ಮೀನು, ಡೈರಿ ಮತ್ತು ಹಾಲಿನ ಕೇಂದ್ರಗಳು, ಮತ್ತು ಪ್ರಾಣಿಗಳ ಮೇವನ್ನು ವ್ಯಾಪಾರ ಮಾಡುವ ಅಂಗಡಿಗಳಿಗೆ ಬೀದಿಬದಿ ವ್ಯಾಪಾರಸ್ಥರು, ಸಾರ್ವಜನಿಕ ವಿತರಣಾ ವ್ಯವಸ್ಥೆ (ಫಿಡಿಎಸ್)ಯ ಅಂಗಡಿಗಳಿಗೆ ಅವಕಾಶವಿದೆ.

ಸ್ವತಂತ್ರ ಮದ್ಯದಂಗಡಿಗಳು ಮತ್ತು ಮಳಿಗೆಗಳಲ್ಲಿ ಬೆಳಿಗ್ಗೆ 6ರಿಂದ ಅಪರಾಹ್ನ 2ರವರೆಗೆ ಪಾರ್ಸೆಲ್ ಕೊಂಡುಹೋಗಲು ಮಾತ್ರ ಅನುಮತಿ ಸಲಾಗಿದೆ. ಶವ ಸಂಸ್ಕಾರ/ಅಂತ್ಯಕ್ರಿಯೆಗಳನ್ನು ಗರಿಷ್ಠ 5 ಜನರೊಂದಿಗೆ ಕೋವಿಡ್ ಸಮುಚಿತ ವರ್ತನೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ತಹಶೀಲ್ದಾರ್‌ರಿಂದ ಅನುಮತಿ ಯನ್ನು ಪಡೆಯಲಾಗಿರುವ ಮದುವೆಯನ್ನು ಸರಳವಾಗಿ ಆಯಾ ಮನೆಗಳಲ್ಲಿ ಕುಟುಂಬದ ಸದಸ್ಯರು /ಸಂಬಂಧಿಕರು ಸೇರಿದಂತೆ 40 ಜನರನ್ನು ಒಳಗೊಂಡು ಮಾಡಬೇಕು.

ದೂರದ ಪ್ರಯಾಣದ ರೈಲುಗಳು ಮತ್ತು ವಿಮಾನ ಪ್ರಯಾಣವನ್ನು ಅನು ಮತಿಸಲಾಗಿದೆ. ಪ್ರಯಾಣ ಮಾಡುವ ಸಂಧರ್ದಲ್ಲಿ ಪ್ರಯಾಣಿಕರು ಸೂಕತಿ ಪ್ರಯಾಣದ ದಾಖಲೆಗಳು/ಟಿಕೆಟುಗಳನ್ನು ತೋರಿಸಬೇಕು. ಇವುಗಳನ್ನು ಹೊರತು ಪಡಿಸಿ ಉಳಿದ ಎಲ್ಲ ಚಟುವಟಿಕೆಗಳು ಬಂದ್ ಆಗಲಿದೆ ಎಂದು ಎಂದು ಅವರು ತಿಳಿಸಿದ್ದಾರೆ.

ಪೊಲೀಸ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳಿಗೆ ವಿಕೇಂಡ್ ಕರ್ಫ್ಯೂ ಅನ್ನು ಕಟ್ಟುನಿಟ್ಟಾಗಿ ಪಾಲಿಸಲು ಹಾಗೂ ಉಲ್ಲಂಘನೆ ಮಾಡುವವರು ವಿರುದ್ಧ ಕಠಿಣ ಕ್ರಮ ಜರಗಿಸುವಂತೆ ಸೂಚನೆ ನೀಡಲಾಗಿದೆ. ಆದುದರಿಂದ ಸಾರ್ವ ಜನಿಕರು ಈ ಎರಡು ದಿನಗಳ ಕಾಲ ಅನಗತ್ಯ ಮನೆಯಿಂದ ಹೊರಗಡೆ ಬಾರಬಾರದು ಎಂದು ಜಿಲ್ಲಾಧಿಕಾರಿ ಮನವಿ ಮಾಡಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News