ದೇವರ ದರ್ಶನಕ್ಕೆ ಅವಕಾಶವಿಲ್ಲದಿದ್ದರೂ ಧರ್ಮಸ್ಥಳ ಕ್ಷೇತ್ರಕ್ಕೆ ಭಾರೀ ಸಂಖ್ಯೆಯಲ್ಲಿ ಜನರು ಆಗಮನ

Update: 2021-06-19 05:37 GMT
ಶ್ರೀ ಕ್ಷೇತ್ರ ಧರ್ಮಸ್ಥಳದ ಪ್ರಕಟನೆ

ಬೆಳ್ತಂಗಡಿ, ಜೂ.19: ಬೆಂಗಳೂರಿನಲ್ಲಿ ಹಾಗೂ ಇತರ ಕೆಲ ಜಿಲ್ಲೆಗಳಲ್ಲಿ ಲಾಕ್ಡೌನ್ ಸಡಿಲಿಕೆಯಾದ ಹಿನ್ನೆಲೆಯಲ್ಲಿ ಭಾರೀ ಸಂಖ್ಯೆಯಲ್ಲಿ ಜನರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬರುತ್ತಿದ್ದು ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ. ಶ್ರೀ ಕ್ಷೇತ್ರದಲ್ಲಿ ದೇವರ ದರ್ಶನಕ್ಕೆ ಅವಕಾಶವಿಲ್ಲದಿದ್ದರೂ ಕಳೆದ ಎರಡು ದಿನಗಳಿಂದ ನೂರಾರು ಸಂಖ್ಯೆಯಲ್ಲಿ ಭಕ್ತರು ವಾಹನಗಳ ಮೂಲಕ ಶ್ರೀ ಕ್ಷೇತ್ರಕ್ಕೆ ಬರುತ್ತಿದ್ದು ನೇತ್ರಾವತಿ ಸ್ನಾನಘಟ್ಟದಲ್ಲಿ  ಜನದಟ್ಟಣೆ ಕಾಣಿಸಿದೆ. ಅದಲ್ಲದೆ ಮಾಸ್ಕ್ ಹಾಗೂ ಸುರಕ್ಷಿತ ಅಂತರದ ವಿಚಾರಗಳೇ ಇಲ್ಲಿ ಕಾಣಿಸುತ್ತಿಲ್ಲ ಎಂದು ಸ್ಥಳೀಯರು ದೂರಿದ್ದಾರೆ. 

ನೂರಾರು ಸಂಖ್ಯೆಯಲ್ಲಿ ವಾಹನಗಳು ಜಿಲ್ಲಾ ಗಡಿಯನ್ನು ದಾಟಿ ಬರಲು ಹೇಗೆ ಸಾಧ್ಯವಾಗುತ್ತಿದೆ? ಜಿಲ್ಲಾ ಗಡಿಯಲ್ಲಿ ಯಾಕೆ ವಾಹನ ತಪಾಸಣೆ ನಡೆಸುತ್ತಿಲ್ಲ? ಸರಕಾರದ ಕಟ್ಟುನಿಟ್ಟಿನ ಕ್ರಮಗಳು ಕೇವಲ ಹಳ್ಳಿಯ ಜನರಿಗೆ ಮಾತ್ರವೇ ಹೊರಗಿನಿಂದ ಬರುವವರಿಗೆ ಯಾಕೆ ಜಿಲ್ಲಾಡಳಿತ ಅವಕಾಶ ನೀಡುತ್ತಿದೆ ಎಂಬುದು ಸ್ಥಳೀಯರ ಪ್ರಶ್ನೆಯಾಗಿದೆ.

ಲಾಕ್ಡೌನ್ ಮುಗಿದ ಬಳಿಕ ಬನ್ನಿ: ಧರ್ಮಸ್ಥಳ ಶ್ರೀ ಕ್ಷೇತದ ಪ್ರಕಟನೆ 

ರಾಜ್ಯದ ಹೆಚ್ಚಿನ ಜಿಲ್ಲೆಗಳಲ್ಲಿ ಲಾಕ್ಡೌನ್ ತೆರವುಗೊಂಡಿದ್ದರೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೂನ್ 21ರ ವರೆಗೆ ಲಾಕ್ಡೌನ್ ಜಾರಿಯಲ್ಲಿರುವುದರಿಂದ ಭಕ್ತಾದಿಗಳು ಅವಧಿ ಮುಗಿದ ಬಳಿಕ ಶ್ರೀಕ್ಷಾತ್ರ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಧ ಸ್ವಾಮಿಯ ದರ್ಶನ ಪಡೆಯಬಹುದಾಗಿದೆ. ಸರಕಾರ ಹೊರಡಿಸಿದ ಮಾರ್ಗಸೂಚಿಗಳನ್ನು ಕಟ್ಟು ನಿಟ್ಟಾಗಿ ಪಾಲಿಸುವಂತೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಯವರ ಆಪ್ತ ಕಾರ್ಯದರ್ಶಿ ವೀರು ಶೆಟ್ಟಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News