ಬಿ.ಸಿ.ರೋಡ್: ಪಾಣೆಮಂಗಳೂರು ಬ್ಲಾಕ್ ಯುವ ಕಾಂಗ್ರೆಸ್ ನಿಂದ ಸಸಿ ನೆಡುವ ಕಾರ್ಯಕ್ರಮ

Update: 2021-06-19 07:19 GMT

ಬಿ.ಸಿ.ರೋಡ್, ಜೂ.19 : ಯುವ ಕಾಂಗ್ರೆಸ್ ಪಾಣೆಮಂಗಳೂರು ಬ್ಲಾಕ್ ಇದರ ವತಿಯಿಂದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಯುವ ನಾಯಕ ರಾಹುಲ್ ಗಾಂಧಿ ಅವರ ಹುಟ್ಟುಹಬ್ಬದ ಪ್ರಯುಕ್ತ ಶನಿವಾರ ಬಿ.ಸಿ.ರೋಡ್ ಡಿವೈಡರ್ ಬಳಿ ಸಸಿಗಳನ್ನು ನೆಡಲಾಯಿತು.

ಜಿಲ್ಲಾ ಮಾಜಿ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹೀಂ ನವಾಝ್ ಬಡಕಬೈಲು, ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ಅಬ್ಬಾಸ್ ಅಲಿ, ಬೂಡ ಮಾಜಿ ಅಧ್ಯಕ್ಷ ಸದಾಶಿವ ಬಂಗೇರ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸಿದ್ದೀಕ್ ಸರವು, ಯುವ ಕಾಂಗ್ರೆಸ್ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಮಾಜಿ ಅಧ್ಯಕ್ಷರಾದ ಪ್ರಶಾಂತ್ ಕುಲಾಲ್, ಬಂಟ್ವಾಳ ಎನ್.ಎಸ್.ಯು.ಐ. ಅಧ್ಯಕ್ಷ ವಿನಯ್ ಕುಮಾರ್ ಸಿಂಧ್ಯಾ, ರೋಷನ್ ರೈ, ಇರ್ಷಾದ್ ಪಾಣೆಮಂಗಳೂರು, ಹೊನ್ನಯ್ಯ ಸುವರ್ಣ, ಅರ್ಷದ್ ಸರವು, ಯುವ ಕಾಂಗ್ರೆಸ್ ಪದಾಧಿಕಾರಿಗಳಾದ ಶರೀಫ್ ಬೂಯ್ಯ, ಸಿರಾಜ್ ಮದಕ, ಗೀತೇಶ್ ಕರ್ಕೆರಾ, ಬಶೀರ್ ಕಿಡಾವು, ಸಂಜೀತ್ ತುಂಬೆ, ಸಮದ್, ಗಣೇಶ್ ಪೂಂಜರಕೋಡಿ, ನೌಫಲ್ ನೆಹರುನಗರ, ಹಿಶಾಂ ಬಿ. ಎಂ.ಬಿ., ತನ್ವೀರ್ ಮೆಲ್ಕಾರ್, ಸಜ್ಜಾದ್ ಪಿ.ಎಂ., ಶಲೂಲ್ ಜಿ.ಕೆ., ನಯೀಮ್ ಎನ್.ಬಿ. ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News