ಧರ್ಮಪಾಲ್ ನಾಯಕ್

Update: 2021-06-19 12:26 GMT

ಮಂಗಳೂರು: ನಗರದ ಪಂಪ್ ವೆಲ್ ನಿವಾಸಿ, ಸಾಮಾಜಿಕ ಕಾರ್ಯಕರ್ತ ಧರ್ಮಪಾಲ್ ನಾಯಕ್ ಪಂಪ್ ವೆಲ್ (69) ಅವರು ಶನಿವಾರ ಹೃದಯಾಘಾತಕ್ಕೊಳಗಾಗಿ ನಿಧನರಾಗಿದ್ದಾರೆ.

ಬೆಳಿಗ್ಗೆ ವಿಪರೀತ ಹೊಟ್ಟೆ ನೋವು ಕಾಣಿಸಿಕೊಂಡ ಅವರನ್ನು ತಕ್ಷಣ ಮನೆ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಬಂದರಿನಲ್ಲಿರುವ ಸಾಹುಕಾರ್ ಎಂ.ಬಾಬಾ ಪೈ ಆ್ಯಂಡ್ ಕೋ. ಪಟ್ರೋಲ್ ಬಂಕ್ ನಲ್ಲಿ ಕಳೆದ 47 ವರ್ಷಗಳಿಂದ ಅಕೌಂಟೆಂಟ್ ಆಗಿ ಕಾರ್ಯನಿರ್ವಹಿಸಿದ್ದರು. ಗಾಳದ ಕೊಂಕಣಿ ಅಭ್ಯುದಯ ಸಂಘದಲ್ಲಿ ಸುದೀರ್ಘ ಅವಧಿಯಿಂದ ಕಾರ್ಯಕಾರಿ ಸಮಿತಿ ಸದಸ್ಯರಾಗಿದ್ದಾರಲ್ಲದೆ, ತೊಕ್ಕೊಟ್ಟು ಶ್ರೀ ಸೋಮೇಶ್ವರೀ ಸೌ.ಸ.ನಿ.ದಲ್ಲಿ‌ ಉಪಾಧ್ಯಕ್ಷರಾಗಿ, ಶ್ರೀ ಕ್ಷೇತ್ರ ಸೋಮನಾಥ ಉಳಿಯದ ಆಡಳಿತ ಸಮಿತಿಯಲ್ಲಿ ಕೋಶಾಧಿಕಾರಿಯಾಗಿಯು ಸೇವೆ ಸಲ್ಲಿಸಿದ್ದಾರೆ.

ಮೃತರು ಪತ್ನಿ, ಪುತ್ರ, ಪುತ್ರಿ ಹಾಗೂ ಬಂಧುಬಳಗವನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಗಾಳದ ಕೊಂಕಣಿ ಅಭ್ಯುದಯ ಸಂಘ ಮಂಗಳೂರು,ಶ್ರೀ ಸೋಮೇಶ್ವರೀ ಸೌ.ಸ.ನಿ.ದ ಆಡಳಿತ ಮಂಡಳಿ ಮತ್ತು ಸಿಬ್ಬಂದಿ ವರ್ಗ ಹಾಗೂ ಶ್ತೀಕ್ಷೇತ್ರ ಸೋಮನಾಥ ಉಳಿಯದ ಆಡಳಿತ ಸಮಿತಿ‌ ಶೋಕ ವ್ಯಕ್ತಪಡಿಸಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ