ಉಡುಪಿ : ಕೋವಿಡ್ ಗೆ ಇಬ್ಬರು ಬಲಿ, 174 ಮಂದಿಗೆ ಕೊರೋನ ಸೋಂಕು

Update: 2021-06-19 13:54 GMT

ಉಡುಪಿ, ಜೂ.19: ಜಿಲ್ಲೆಯ ಒಟ್ಟು 174 ಮಂದಿಯಲ್ಲಿ ಶನಿವಾರ ಕೋವಿಡ್ ಸೋಂಕು ದೃಢಪಟ್ಟಿವೆ. ದಿನದಲ್ಲಿ ಇಬ್ಬರು ಕೋವಿಡ್‌ಗೆ ಬಲಿಯಾದರೆ, 454 ಮಂದಿ ಚಿಕಿತ್ಸೆಯಿಂದ ಗುಣಮುಖರಾಗಿದ್ದಾರೆ. ಸದ್ಯ 1885 ಮಂದಿ ಸಕ್ರಿಯ ಸೋಂಕಿತರು ಜಿಲ್ಲೆಯಲ್ಲಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.

ಇಂದು ಕಾರ್ಕಳ ತಾಲೂಕಿನ 57 ಮತ್ತು 63 ವರ್ಷ ಪ್ರಾಯದ ಪುರುಷರು ಕೊರೋನ ಸೋಂಕಿನಿಂದ ಮೃತಪಟ್ಟಿದ್ದಾರೆ. ಈ ಮೂಲಕ ಕೋವಿಡ್‌ಗೆ ಜಿಲ್ಲೆಯಲ್ಲಿ ಬಲಿಯಾದವರ ಸಂಖ್ಯೆ 371ಕ್ಕೇರಿದೆ. ಮೃತರಿಬ್ಬರೂ ಗಂಭೀರ ಕೋವಿಡ್ ಗುಣಲಕ್ಷಣ ಹಾಗೂ ತೀವ್ರವಾದ ಉಸಿರಾಟ ತೊಂದರೆಯೊಂದಿಗೆ ಇತರ ಆರೋಗ್ಯ ಸಮಸ್ಯೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು.

ಇಂದು ಪಾಸಿಟಿವ್ ಬಂದ 174 ಮಂದಿಯಲ್ಲಿ 84 ಮಂದಿ ಪುರುಷರು ಹಾಗೂ 90 ಮಂದಿ ಮಹಿಳೆಯರು. ಇವರಲ್ಲಿ ಉಡುಪಿ ತಾಲೂಕಿನ 72, ಕುಂದಾಪುರ ತಾಲೂಕಿನ 55 ಹಾಗೂ ಕಾರ್ಕಳ ತಾಲೂಕಿನ 44 ಮಂದಿ ಇದ್ದು, ಉಳಿದ ಮೂವರು ಹೊರಜಿಲ್ಲೆಯವರು. ಇವರಲ್ಲಿ 12 ಮಂದಿ ಕೋವಿಡ್ ಆಸ್ಪತ್ರೆ ಹಾಗೂ 162 ಮಂದಿ ಹೋಮ್ ಐಸೋಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ.

ಶುಕ್ರವಾರ ಒಟ್ಟು 454 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಜಿಲ್ಲೆಯಲ್ಲಿ ಈವರೆಗೆ ಕೊರೋನದಿಂದ ಚೇತರಿಸಿಕೊಂಡವರ ಸಂಖ್ಯೆ ಈಗ 62,934ಕ್ಕೇರಿದೆ. ನಿನ್ನೆ ಜಿಲ್ಲೆಯಲ್ಲಿ 3464 ಮಂದಿಗೆ ಕೋವಿಡ್ ಪರೀಕ್ಷೆ ಮಾಡಲಾಗಿದೆ. ಜಿಲ್ಲೆಯಲ್ಲಿ ಈವರೆಗೆ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ ಈಗ 65,190 ಆಗಿದೆ ಎಂದು ಡಾ.ಉಡುಪ ತಿಳಿಸಿದರು.

ಉಡುಪಿ ಜಿಲ್ಲೆಯಲ್ಲಿ ಈವರೆಗೆ ಒಟ್ಟು 6,53,247 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದೆ.

ಒಬ್ಬರು ಬಿಡುಗಡೆ: ಜಿಲ್ಲೆಯಲ್ಲಿ ಕಪ್ಪು ಶಿಲೀಂದ್ರ ಸೋಂಕಿಗೆ ಚಿಕಿತ್ಸೆ ಪಡೆಯುತಿದ್ದ ಏಳು ಮಂದಿಯಲ್ಲಿ ಒಬ್ಬರು ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶನಿವಾರ 4,661 ಮಂದಿಗೆ ಲಸಿಕೆ

ಇಂದು ಜಿಲ್ಲೆಯಲ್ಲಿ 4,661 ಮಂದಿ ಕೋವಿಡ್ ಲಸಿಕೆಯನ್ನು ಸ್ವೀಕರಿಸಿದ್ದಾರೆ. ಇವರಲ್ಲಿ 3610 ಮಂದಿ ಲಸಿಕೆಯ ಮೊದಲ ಡೋಸ್ ಸ್ವೀಕರಿಸಿದರೆ, 1051 ಮಂದಿ ಎರಡನೇ ಡೋಸ್ ಪಡೆದಿದ್ದಾರೆ ಎಂದು ಡಿಎಚ್‌ಓ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.

ಇಂದು 18ರಿಂದ 44 ವರ್ಷದೊಳಗಿನ 2303 ಮಂದಿ ಮೊದಲ ಡೋಸ್‌ನ್ನು ಪಡೆದಿದ್ದಾರೆ. 45 ವರ್ಷ ಮೇಲಿನ 1267 ಮಂದಿ ಮೊದಲ ಡೋಸ್ ಹಾಗೂ 1014 ಮಂದಿ ಎರಡನೇ ಡೋಸ್‌ನ್ನು ಪಡೆದಿದ್ದಾರೆ. 55 ಮಂದಿ ಆರೋಗ್ಯ ಕಾರ್ಯಕರ್ತರು ಹಾಗೂ 22 ಮಂದಿ ಮುಂಚೂಣಿ ಕಾರ್ಯಕರ್ತರು ಸಹ ಇಂದು ಲಸಿಕೆ ಸ್ವೀಕರಿಸಿದವರಲ್ಲಿ ಸೇರಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೆ 3,35,408 ಮಂದಿ ಲಸಿಕೆಯ ಮೊದಲ ಡೋಸ್‌ನ್ನು ಪಡೆದರೆ, 95,306 ಮಂದಿ ಎರಡನೇ ಡೋಸ್‌ನ್ನು ಪಡೆದುಕೊಂಡಿದ್ದಾರೆ ಎಂದು ಡಾ.ಉಡುಪ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News