ಬಿ.ಸಿ.ರೋಡ್: ಯುವ ಕಾಂಗ್ರೆಸ್ ನಿಂದ ಸಸಿ ನೆಡುವ ಕಾರ್ಯಕ್ರಮ

Update: 2021-06-19 14:02 GMT

ಬಂಟ್ವಾಳ, ಜೂ.19: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ಹುಟ್ಟುಹಬ್ಬದ ಪ್ರಯುಕ್ತ ಯುವ ಕಾಂಗ್ರೆಸ್ ಸಮಿತಿ ಪಾಣೆಮಂಗಳೂರು ಬ್ಲಾಕ್ ಇದರ ವತಿಯಿಂದ ಶನಿವಾರ ಬಿ.ಸಿ.ರೋಡ್ ನಲ್ಲಿ ಸಸಿ ನೆಡುವ ಕಾರ್ಯಕ್ರಮ ನಡೆಯಿತು.

ಮಾಜಿ ಸಚಿವ ಬಿ.ರಮಾನಾಥ ರೈ ಅವರು ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಇಬ್ರಾಹೀಂ ನವಾಝ್ ಅಧ್ಯಕ್ಷತೆ ವಹಿಸಿದ್ದರು.

ಜಿಲ್ಲಾ ಪಂಚಾಯತ್ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ತಾಲೂಕು ಪಂಚಾಯತ್ ಉಪಾಧ್ಯಕ್ಷ ಅಬ್ಬಾಸ್ ಅಲಿ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಬಂಟ್ವಾಳ ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಸಮಿತಿ ಮಾಜಿ ಅಧ್ಯಕ್ಷ ಪ್ರಶಾಂತ್ ಕುಲಾಲ್, ಬಂಟ್ವಾಳ ಎನ್.ಎಸ್‌.ಯು.ಐ. ಅಧ್ಯಕ್ಷ ವಿನಯ್ ಕುಮಾರ್ ಸಿಂದ್ಯಾ, ಬೂಡ ಮಾಜಿ ಅಧ್ಯಕ್ಷ ಸದಾಶಿವ ಬಂಗೇರ, ಪ್ರಮುಖರಾದ ರೋಷನ್, ಇರ್ಷಾದ್, ಹರ್ಷದ್ ಮದಕ, ಗಣೇಶ್ ಪೂಂಜರ ಕೋಡಿ, ಪಾಣೆಮಂಗಳೂರು ಬ್ಲಾಕ್ ಕಾರ್ಯದರ್ಶಿ ಸಿದ್ದಿಕ್ ಸರವು, ಯುವ ಕಾಂಗ್ರೆಸ್  ಬ್ಲಾಕ್ ಸಮಿತಿ ಪದಾಧಿಕಾರಿಗಳಾದ ಬೂಯಾ ಶರೀಫ್, ಸಿರಾಜ್ ಮದಕ, ಜೈಸನ್ ಕ್ರಾಸ್ತಾ, ಗೀತೇಶ್ ಕರ್ಕೇರಾ, ನೌಫಲ್ ನೆಹರೂ ನಗರ ಮೊದಲಾದವರು  ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News