ಎನ್ಎಸ್ಯುಐನಿಂದ ಬಟ್ಟೆಬರೆ ವಿತರಣೆ
Update: 2021-06-19 20:23 IST
ಮಂಗಳೂರು, ಜೂ.19: ಎಐಸಿಸಿ ವರಿಷ್ಠ ರಾಹುಲ್ ಗಾಂಧಿಯ ಹುಟ್ಟು ಹಬ್ಬದ ಪ್ರಯುಕ್ತ ಎನ್ಎಸ್ಯುಐ ದ.ಕ. ಜಿಲ್ಲಾ ಸಮಿತಿಯು ಸಂಗ್ರಹಿಸಿದ ಬಟ್ಟೆಗಳನ್ನು ಲಾಕ್ಡೌನ್ನಿಂದ ಸಂಕಷ್ಟಕ್ಕೆ ಒಳಗಾಗಿರುವ 500ಕ್ಕೂ ಹೆಚ್ಚು ನಿರ್ಗತಿಕರಿಗೆ ಹಾಗೂ ನಿರಾಶ್ರಿತರಿಗೆ ಶನಿವಾರ ನಗರದ ಸ್ಟೇಟ್ಬ್ಯಾಂಕ್ ಪರಿಸರದಲ್ಲಿ ವಿತರಿಸಲಾಯಿತು.
ಈ ಸಂದರ್ಭ ಎನ್ಎಸ್ಯುಐ ದ.ಕ.ಜಿಲ್ಲಾಧ್ಯಕ್ಷ ಸವಾದ್ ಸುಳ್ಯ, ಮುಖಂಡರಾದ ಫಾರೂಕ ಬಯಬೆ, ಅಂಕುಶ್ ಶೆಟ್ಟಿ, ಬಾತಿಷ್ ಅಳಕೆಮಜಲು, ನಿಖಿಲ್ ಪೂಜಾರಿ, ತಮೀಝ್ ಅಳಕೆಮಜಲು, ಅಯಾಝ್ ಚಾರ್ಮಾಡಿ, ಯಶವಂತ್ ಅಡ್ಯಡ್ಕ, ನಜೀಬ್ ಮಂಚಿ, ಸಮಾಜ ಸೇವಕರಾದ ಸುಹಾನ್ ಆಳ್ವ, ಅನ್ಸಾರುದ್ದೀನ್ ಸಾಲ್ಮರ ಮತ್ತಿತರರು ಉಪಸ್ಥಿತರಿದ್ದರು.