ಶಾಸಕ ಬೆಲ್ಲದ್ ರಿಗೆ ಜೈಲಿನಿಂದ ಕರೆ ಮಾಡಿರುವ ಆರೋಪ ಪ್ರಕರಣ: ತನಿಖೆ ಕೈಗೊಂಡ ಪೊಲೀಸರು
Update: 2021-06-19 16:06 GMT
ಬೆಂಗಳೂರು, ಜೂ.19: ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಅವರಿಗೆ ಜೈಲಿನಿಂದ ಕರೆ ಮಾಡಿರುವ ಆರೋಪ ಪ್ರಕರಣದ ಸಂಬಂಧ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಶನಿವಾರ ನಗರದಲ್ಲಿ ಶಾಸಕ ಅರವಿಂದ್ ಬೆಲ್ಲದ್ ಅವರನ್ನು ಎಸಿಪಿ ಯತಿರಾಜ್ ಭೇಟಿ ಮಾಡಿ ಕೆಲ ಪ್ರಾಥಮಿಕ ಮಾಹಿತಿ ಸಂಗ್ರಹಿಸಿದರು.
ಕರೆ ಬಂದಿದ್ದ ಮೊಬೈಲ್ ಸಂಖ್ಯೆ ಸೇರಿ ಅನೇಕ ಮಾಹಿತಿ ಪಡೆದಿದ್ದಾರೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ಅವಶ್ಯಕತೆ ಇದ್ದರೆ ಸಹಕರಿಸುವಂತೆ ಪೊಲೀಸರು ತಿಳಿಸಿದ್ದಾರೆ.
ಇನ್ನು, ಶಾಸಕ ಅರವಿಂದ್ ಬೆಲ್ಲದ್ಗೆ ಜೈಲಿನಿಂದ ಕರೆ ಬಂದಿರುವ ಆರೋಪ ಸಂಬಂಧ, ಕಬ್ಬನ್ ಪಾರ್ಕ್ ಎಸಿಪಿಗೆ ತನಿಖೆ ನಡೆಸುವಂತೆ ಸೂಚನೆ ನೀಡಿರುವುದಾಗಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ನಿನ್ನೆ ತಿಳಿಸಿದ್ದರು. ಪ್ರಕರಣ ಸಂಬಂಧ ತನಿಖೆಯನ್ನು ಕೇಂದ್ರ ವಿಭಾಗದ ಡಿಸಿಪಿ ಅನುಚೇತ್ ನೇತೃತ್ವದಲ್ಲಿ ಎಸಿಪಿ ಯತಿರಾಜ್ಗೆ ವಹಿಸಲಾಗಿದ್ದು, ಈಗಾಗಲೇ ತನಿಖೆ ನಡೆಸುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದರು.