ಜೂ. 20ರಂದು ಲಾಕ್‌ಡೌನ್ ಬಗ್ಗೆ ತೀರ್ಮಾನ; ಸಚಿವ ಕೋಟ

Update: 2021-06-19 17:02 GMT

ಮಂಗಳೂರು, ಜೂ.19: ಲಾಕ್‌ಡೌನ್ ವಿಸ್ತರಣೆ ಅಥವಾ ಸಡಿಲಿಕೆ ಕುರಿತಂತೆ ಜೂ.20ರಂದು ಜಿಲ್ಲಾಧಿಕಾರಿಯ ಜೊತೆ ಸಮಾಲೋಚಿಸಿ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಕೊರೋನ ಸ್ಥಿತಿಗತಿ ಬಗ್ಗೆ ಮುಖ್ಯಮಂತ್ರಿಗೆ ವಿವರಿಸಲಾಗಿದೆ. ಆದಾಗ್ಯೂ ಲಾಕ್‌ಡೌನ್ ಕುರಿತು ಜೂ.20ರಂದು ಜಿಲ್ಲಾಧಿಕಾರಿ ಹಾಗೂ ಇತರ ಜನಪ್ರತಿನಿಧಿಗಳ ಜೊತೆ ಚರ್ಚಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News