ಆರು ಕೆಎಎಸ್ ಅಧಿಕಾರಿಗಳ ವರ್ಗಾವಣೆ

Update: 2021-06-19 18:08 GMT

ಬೆಂಗಳೂರು, ಜೂ.19: ಸಾರ್ವಜನಿಕ ಮತ್ತು ಆಡಳಿತದ ಹಿತದೃಷ್ಟಿಯಿಂದ ತಕ್ಷಣದಿಂದಲೇ ಜಾರಿಗೆ ಬರುವಂತೆ ಆರು ಮಂದಿ ಕೆಎಎಸ್ ಅಧಿಕಾರಿಗಳನ್ನು ಅವರ ಹೆಸರಿನ ಮುಂದಿನ ಸೂಚಿತ ಸ್ಥಳಕ್ಕೆ ನಿಯೋಜನೆಗೊಳ್ಳುವಂತೆ ವರ್ಗಾವಣೆ ಮಾಡಿ ರಾಜ್ಯ ಸರಕಾರ ಶನಿವಾರ ಆದೇಶ ಹೊರಡಿಸಿದೆ.

ರಂಗಪ್ಪ ಎಸ್.-ಕಾರ್ಯದರ್ಶಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ-ಬೆಂಗಳೂರು, ಡಾ.ವಾಸಂತಿ ಅಮರ್ ಬಿ.ವಿ.-ನಿರ್ದೇಶಕರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ಶ್ರೀರೂಪಸ-ನಿಯಂತ್ರಕರು ಕಾನೂನು ಮಾಪನಶಾಸ್ತ್ರ ಇಲಾಖೆ ಬೆಂಗಳೂರು, ಪಾತರಾಜು ವಿ.- ಮುಖ್ಯ ಆಡಳಿತಾಧಿಕಾರಿ ಕೆಆರ್‍ಐಡಿಎಲ್ ಬೆಂಗಳೂರು, ಶೀಲವಂತ ಎಂ. ಶಿವಕುಮಾರ್, ಆಯುಕ್ತರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮೈಸೂರು, ಡಾ.ಡಿ.ಬಿ.ನಟೇಶ್-ಜಂಟಿ ನಿರ್ದೇಶಕರು ಆಯುಕ್ತರ ಕಚೇರಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಬೆಂಗಳೂರು ಇಲ್ಲಿಗೆ ವರ್ಗಾವಣೆ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಅಧೀನ ಕಾರ್ಯದರ್ಶಿ ಟಿ.ಮಹಂತೇಶ್ ಆದೇಶ ಹೊರಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News