ಕೆಮ್ಮಾರ: ಇಲಿ ಪಾಷಾಣ ತಿಂದು ಮಗು ಮೃತ್ಯು

Update: 2021-06-20 11:49 GMT

ನೆಲ್ಯಾಡಿ, ಜೂ.20: ಆಕಸ್ಮಿಕವಾಗಿ ಇಲಿ ಪಾಷಾಣ ತಿಂದು ಎರಡೂವರೆ ವರ್ಷದ ಮಗುವೊಂದು ಮೃತಪಟ್ಟ ಘಟನೆ ಬಜತ್ತೂರು ಗ್ರಾಮದ ಕೆಮ್ಮಾರದಲ್ಲಿ ನಡೆದಿದೆ.

ಕೆಮ್ಮಾರ ನಿವಾಸಿ, ನಿವೃತ್ತ ಸೈನಿಕ ಸೈಜು ಎಂಬವರ ಪುತ್ರಿ, ಎರಡೂವರೆ ವರ್ಷದ ಶ್ರೇಯಾ ಮೃತಪಟ್ಟ ಮಗು. ಜೂ.19ರಂದು ಬೆಳಗ್ಗೆ ಮಗುವಿನ ತಂದೆ-ತಾಯಿ ನಾಯಿಗೂಡಿನ ಮೇಲಿದ್ದ ಸಾಮಗ್ರಿಗಳನ್ನು ತೆಗೆದು ಸ್ವಚ್ಛಗೊಳಿಸುತ್ತಿದ್ದ ವೇಳೆ ಎರಡು-ಮೂರು ತಿಂಗಳ ಹಿಂದೆ ತಂದಿದ್ದ ಇಲಿ ಪಾಷಾಣದ ಟ್ಯೂಬ್ ಸಹ ಅಲ್ಲಿ ಸಿಕ್ಕಿತ್ತು. ಮನೆಯವರು ಕೆಲಸ ಮಾಡುತ್ತಿದ್ದಂತೆ ಮಗು ಆಟವಾಡುತ್ತ ಬಂದು ಆ ಇಲಿ ಪಾಷಾಣವನ್ನು ತಿಂದಿದೆ ಎಂದು ಹೇಳಲಾಗಿದೆ. ಮಧ್ಯಾಹ್ನದ ವೇಳೆ ಮಗುವಿಗೆ ವಾಂತಿ ಆರಂಭಗೊಂಡಿದ್ದು ತಕ್ಷಣ ಉಪ್ಪಿನಂಗಡಿಯ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಬಳಿಕ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಗು ತೀವ್ರ ಅಸ್ವಸ್ಥಗೊಂಡಿದ್ದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ತಪಾಸಣೆ ವೇಳೆ ಮಗು ಮೃತಪಟ್ಟಿರುವುದಾಗಿ ವರದಿಯಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News