ನಾಯಕತ್ವ ಬದಲಾವಣೆ ಚರ್ಚೆಯ ನಡುವೆ ಮುಂಬೈಗೆ ತೆರಳಿದ ರಮೇಶ್ ಜಾರಕಿಹೊಳಿ

Update: 2021-06-20 14:19 GMT

ಬೆಳಗಾವಿ, ಜೂ. 20: ಬಿಜೆಪಿ ಪಕ್ಷದಲ್ಲಿ ನಾಯಕತ್ವ ಬದಲಾವಣೆ ಚರ್ಚೆಯ ನಡುವೆ ಮಾಜಿ ಸಚಿವ ಹಾಗೂ ಗೋಕಾಕ್ ಕ್ಷೇತ್ರದ ಶಾಸಕ ರಮೇಶ ಜಾರಕಿಹೊಳಿ ಮುಂಬೈಗೆ ತೆರಳಿರುವುದು ನಾನಾ ರೀತಿಯ ರಾಜಕೀಯ ಚರ್ಚೆಗೆ ಗ್ರಾಸವಾಗಿದೆ.

ರವಿವಾರ ಅವರು ಮುಂಬೈಗೆ ತೆರಳಿದ್ದು, ಮೂಲಗಳ ಪ್ರಕಾರ ರಮೇಶ ಜಾರಕಿಹೊಳಿ ಜೊತೆ ಇನ್ನೂ ಐದಕ್ಕೂ ಹೆಚ್ಚು ಶಾಸಕರು ಮುಂಬೈಗೆ ತೆರಳಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಈ ಮೂಲಕ ಸರಕಾರದ ಸಂಪುಟ ಪುನಾರಚನೆ ಮಾಡುವಂತೆ ಒತ್ತಡ ಹೇರುವ ತಂತ್ರವೂ ಇದರ ಹಿಂದಿದೆ ಎಂದು ಹೇಳಲಾಗುತ್ತಿದೆ.

ಮತ್ತೊಂದೆಡೆ ತಮ್ಮ ವಿರುದ್ಧ ಸರಕಾರದಲ್ಲಿದ್ದವರೇ ಕುತಂತ್ರ ನಡೆಸಿದ್ದಾರೆ. ಅವರಿಂದಲೇ ತಾವು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಯಿತು ಎಂದು ಅಸಮಾಧಾನಗೊಂಡಿರುವ ರಮೇಶ ಜಾರಕಿಹೊಳಿ ಈಗ ಮತ್ತೊಮ್ಮೆ ತಮ್ಮ ಶಕ್ತಿ ಪ್ರದರ್ಶಿಸಲು ಮುಂದಾಗಿದ್ದಾರೆ ಅವರ ಆಪ್ತ ಮೂಲಗಳು ಹೇಳಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News