​ಜೂ. 21: ‘ಸಹಾಯ್ ಆ್ಯಂಬುಲೆನ್ಸ್’ ಸೇವಾರ್ಪಣೆ

Update: 2021-06-20 13:38 GMT

ಮಂಗಳೂರು, ಜೂ.20: ಕರ್ನಾಟಕ ಮುಸ್ಲಿಂ ಜಮಾಅತ್‌ನಿಂದ ಕೆಸಿಎಫ್ ಒಮಾನ್ ಪ್ರಾಯೋಜಕತ್ವದಲ್ಲಿ ಮಂಗಳೂರು ನಗರದಲ್ಲಿ ಸೇವೆಗೆ ಸಿದ್ಧವಾಗಿರುವ ‘ಸಹಾಯ್ ಆಂಬ್ಯುಲೆನ್ಸ್’ ಸೇವಾರ್ಪಣೆಯು ಜೂ.21ರಂದು ಬೆಳಗ್ಗೆ 10:30ಕ್ಕೆ ದ.ಕ. ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ನಡೆಯಲಿದೆ.

ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯಾಧ್ಯಕ್ಷ ಮುಫ್ತಿ ಅನ್ವರ್ ಅಲಿ ರಾಮನಗರ ಅಧ್ಯಕ್ಷತೆ ವಹಿಸಲಿದ್ದು, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಅವರ ಉಪಸ್ಥಿತಿಯಲ್ಲಿ, ಕೂರತ್ ತಂಙಳ್ ಆಂಬ್ಯುಲೆನ್ಸ್ ಅರ್ಪಣೆ ಮಾಡಲಿದ್ದಾರೆ.

ಝೈನುಲ್ ಉಲಮಾ ಮಾಣಿ ಉಸ್ತಾದ್, ಹಝ್ರತ್ ಮುಹಮ್ಮದ್ ಫಾಝಿಲ್ ರಝ್ವಿ ಕಾವಳಕಟ್ಟೆ ಶುಭ ಹಾರೈಸಲಿದ್ದಾರೆ.

ಮಂಗಳೂರು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ಶಾಸಕರಾದ ವೇದವ್ಯಾಸ್ ಕಾಮತ್, ಯು.ಟಿ. ಖಾದರ್, ಮಾಜಿ ಶಾಸಕ ಮೊಯ್ದಿನ್ ಬಾವ, ಸುನ್ನಿ ಕೋಆರ್ಡಿನೇಶನ್ ಅಧ್ಯಕ್ಷ ಎಸ್.ಪಿ. ಹಂಝ ಸಖಾಫಿ, ಸಹಾಯ್ ಎಲೈಟ್ ಅಲೈಯನ್ಸ್ ಚೇರ್ಮನ್ ಡಾ.ಯು.ಟಿ. ಇಫ್ತಿಕಾರ್, ಕೆಸಿಎಫ್ ಅಂತರ್ ರಾಷ್ಟ್ರೀಯ ಅಧ್ಯಕ್ಷ ಡಾ. ಶೇಕ್ ಬಾವ, ಕೆಎಂಜೆ ದ.ಕ. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಎಂ. ಮುಮ್ತಾಝ್ ಅಲಿ, ಕೆಸಿಎಫ್ ಒಮನ್ ನಿರ್ದೇಶಕ ಉಮರ್ ಸಖಾಫಿ ಮಿತ್ತೂರು, ಕೆಸಿಎಫ್ ಸೌದಿ ಅರೇಬಿಯಾ ರಾಷ್ಟ್ರೀಯ ಸಮಿತಿ ಅಧ್ಯಕ್ಷ ಡಿ.ಪಿ. ಯೂಸುಫ್ ಸಖಾಫಿ ಬೈತಾರ್, ಕೆಎಂಜೆ ಮಂಗಳೂರು ತಾಲೂಕು ಅಧ್ಯಕ್ಷ ನಾಸಿರ್ ಲಕ್ಕಿಸ್ಟಾರ್, ಕೆಪಿ ಸಿರಾಜುದ್ದೀನ್ ಸಖಾಫಿ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ಕೆ.ಎಂ. ಶಾಫಿ ಸಅದಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News