ಕೊರೋನಪೀಡಿತ ಕುಟುಂಬಕ್ಕೆ ಐವನ್ ಡಿಸೋಜ ಕಿಟ್ ವಿತರಣೆ

Update: 2021-06-20 14:51 GMT

ಮಂಗಳೂರು, ಜೂ.20: ಬಜಾಲ್, ಜಲ್ಲಿಗುಡ್ಡೆ ಪ್ರದೇಶದಲ್ಲಿ ಕೊರೋನ ಪೀಡಿತ, ಹಿಂದುಳಿದ ಕುಟುಂಬಗಳನ್ನು ಗುರುತಿಸಿ ಸುಮಾರು 50 ಕುಟುಂಬಗಳಿಗೆ ಎಐಸಿಸಿ ಕಾರ್ಯದರ್ಶಿ ಐವನ್ ಡಿಸೋಜ ನೇತೃತ್ವದಲ್ಲಿ ದಿನಸಿ ಕಿಟ್ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಐವನ್ ಡಿಸೋಜ, ಕೊರೋನ ತಡೆಗಟ್ಟಲು ಪ್ರತಿಯೊಬ್ಬರೂ ತಮ್ಮದೇ ಆದ ಕೊಡುಗೆ ನೀಡಬೇಕು. ಅಂತರವನ್ನು ಕಾಪಾಡಬೇಕು. ಸರಕಾರ ಕೊಟ್ಟಿರುವ ಯೋಜನೆಗಳಿಗೆ ಅರ್ಜಿ ಸಲ್ಲಿಸುವ ಮೂಲಕ ಅದನ್ನು ಪಡೆಯುವ ಪ್ರಯತ್ನ ಪ್ರತಿಯೊಬ್ಬರೂ ಮಾಡಬೇಕು ಎಂದು ಕರೆ ನೀಡಿದರು.

ಅಸಂಘಟಿತ ಕಾರ್ಮಿಕರಿಗೆ ಕೊರೋನ ಲಸಿಕೆ ನೀಡಲು ಸರಕಾರ ಕ್ರಮ ಕೈಗೊಳ್ಳಬೇಕು. ಈ ದೃಷ್ಟಿಯಲ್ಲಿ ಆರೋಗ್ಯ ಇಲಾಖೆಯನ್ನು ಈಗಾಗಲೇ ಒತ್ತಾಯಿಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ನಾಗೇಂದ್ರ ಕುಮಾರ್, ಭಾಸ್ಕರ್ ರಾವ್, ಎ.ಸಿ. ಜಯರಾಜ್, ಜ್ಯೋತಿ ಪಡೀಲ್, ದೀಕ್ಷೀತ್ ಅತ್ತಾವರ, ಮೀನಾ ತೆಲ್ಲಿಸ್, ಅಭಿಬಲ್ಲ ಕಣ್ಣೂರು, ಭಾಜಿಲ್, ಸ್ಥಳೀಯ ವಾರ್ಡ್ ಅಧ್ಯಕ್ಷ ಆನಂದ ಬಜಾಲ್ ಮುಂತಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News