ಜಾರಕಿಹೊಳಿ ಸೀಡಿ ಪ್ರಕರಣ: ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಯುವತಿಯ ಅರ್ಜಿ ವರ್ಗಾವಣೆ

Update: 2021-06-21 16:58 GMT

ಬೆಂಗಳೂರು, ಜೂ.21: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಹೂಡಿರುವ ಬ್ಲ್ಯಾಕ್‍ಮೇಲ್ ಪ್ರಕರಣವನ್ನು ರದ್ದು ಕೋರಿ ಅಶ್ಲೀಲ ಸೀಡಿಯಲ್ಲಿ ಕಾಣಿಸಿಕೊಂಡಿದ್ದಾರೆ ಎನ್ನಲಾದ ಸಂತ್ರಸ್ತ ಯುವತಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಸೋಮವಾರ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ವರ್ಗಾವಣೆ ಮಾಡಿತು.

ಸಂತ್ರಸ್ತ ಯುವತಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಈ ಆದೇಶ ನೀಡಿತು.

ಯುವತಿ ಪರ ವಾದಿಸಿದ ವಕೀಲ ಸಂಕೇತ್ ಏಣಗಿ, ರಮೇಶ್ ಜಾರಕಿಹೊಳಿ ಹ್ಯಾಂಡ್ ಸಮನ್ಸ್ ಪಡೆದಿಲ್ಲ ಎಂದು ಪೀಠಕ್ಕೆ ತಿಳಿಸಿದರು. ವಕೀಲರ ವಾದ ಆಲಿಸಿದ ನ್ಯಾಯಪೀಠವು ಈ ಪ್ರಕರಣವನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್‍ಗೆ ವರ್ಗಾವಣೆ ಮಾಡಿ ಆದೇಶಿಸಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News