ದ.ಕ.ಜಿಲ್ಲಾದ್ಯಂತ ಎಸ್‌ಡಿಪಿಐ 12ನೇ ಸಂಸ್ಥಾಪನಾ ದಿನಾಚರಣೆ

Update: 2021-06-21 17:45 GMT

ಮಂಗಳೂರು, ಜೂ.21: ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ 12ನೇ ಸಂಸ್ಥಾಪನಾ ದಿನಾಚರಣೆಯು ದ.ಕ. ಜಿಲ್ಲಾದ್ಯಂತ ಸೋಮವಾರ ನಡೆಯಿತು.

ಜಿಲ್ಲೆಯ ಎಲ್ಲಾ ವಿಧಾನಸಬಾ ಕ್ಷೇತ್ರ ವ್ಯಾಪ್ತಿಯ ಗ್ರಾಮ ಮಟ್ಟದಲ್ಲಿ ಪಕ್ಷದ ಧ್ವಜಾರೋಹಣ ಹಾಗೂ ಸಿಹಿತಿಂಡಿ ವಿತರಣೆ ಮತ್ತು ಸಾಮಾಜಿಕ ಕೆಲಸ ಕಾರ್ಯಗಳ ಮೂಲಕ ಸಂಸ್ಥಾಪನಾ ದಿನ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಸ್ಥಳೀಯ ನಾಯಕರು ಮತ್ತು ಚುನಾಯಿತ ಜನಪ್ರತಿನಿಧಿಗಳು ಭಾಗವಹಿಸಿದ್ದರು.

ಜಿಲ್ಲಾ ಸಮಿತಿಯ ವತಿಯಿಂದ ನಗರದಲ್ಲಿ ನಡೆದ ಧ್ವಜಾರೋಹಣವನ್ನು ಪಕ್ಷದ ರಾಷ್ಟ್ರೀಯ ಸಮಿತಿಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಮುಹಮ್ಮದ್ ತುಂಬೆ ನೆರವೇರಿಸಿ ಸಂಸ್ಥಾಪನಾ ದಿನದ ಸಂದೇಶವನ್ನು ನೀಡಿದರು.

ಜಿಲ್ಲಾಧ್ಯಕ್ಷ ಅಥಾವುಲ್ಲಾ ಜೋಕಟ್ಟೆ ಅಧ್ಯಕ್ಷತೆ ವಹಿಸಿದ್ದರು. ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಮಂಡಳಿ ಸದಸ್ಯ ರಿಯಾಝ್ ಫರಂಗಿಪೇಟೆ, ಎಸ್‌ಡಿಟಿಯು ರಾಜ್ಯ ಕಾರ್ಯದರ್ಶಿ ಶರೀಫ್ ಪಾಂಡೇಶ್ವರ, ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಾಹುಲ್ ಹಮೀದ್, ಜಿಲ್ಲಾ ಉಪಾಧ್ಯಕ್ಷ ಇಕ್ಬಾಲ್ ಐಎಂಆರ್ ,ದಕ್ಷಿಣ ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷ ಶುಹೈಲ್ ಖಾನ್ ಉಪಸ್ಥಿತರಿದ್ದರು.

ಅನ್ವರ್ ಸಾದತ್ ಬಜತ್ತೂರು ಸ್ವಾಗತಿಸಿದರು. ಅಕ್ಬರ್ ಕುದ್ರೋಳಿ ವಂದಿಸಿದರು. ಜಿಲ್ಲಾ ಕಾರ್ಯದರ್ಶಿ ಅಶ್ರಫ್ ಮಂಚಿ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News