ಎಸ್ಸೆಸ್ಸೆಫ್ ಸುರತ್ಕಲ್ ಡಿವಿಷನ್ ವತಿಯಿಂದ ತಹ್ಸೀನ್ ಮುತಅಲ್ಲಿಂ ಸಂಗಮ

Update: 2021-06-22 02:50 GMT

ಸುರತ್ಕಲ್ : ಎಸ್ಸೆಸ್ಸೆಫ್  ಸುರತ್ಕಲ್ ಡಿವಿಷನ್ ಸಮಿತಿಯು ಜೂನ್ 19 ಹಾಗೂ 20 ಹಮ್ಮಿಕೊಂಡ ಎರಡು ದಿನಗಳ ಆನ್ ಲೈನ್ "ತಹ್ಸೀನ್" ಎಂಬ ಮುತಅಲ್ಲಿಮರಿಗಾಗಿ ಆಯೋಜಿಸಲಾದ ಕಾರ್ಯಕ್ರಮವು ಡಿವಿಷನ್ ಅಧ್ಯಕ್ಷರಾದ ಹನೀಫ್ ಅಹ್ಸನಿ ಕಾಮಿಲ್ ಸಖಾಫಿ ಶೇಡಿಗುರಿಯವರ ಅಧ್ಯಕ್ಷತೆಯಲ್ಲಿ ಯಶಸ್ವಿಯಾಗಿ ಸಮಾಪ್ತಿಗೊಂಡಿತು.

ಸಂಪನ್ಮೂಲ ವ್ಯಕ್ತಿಗಳಾಗಿ ಮರ್ಕಝ್ ಮುದರ್ರಿಸ್ ಮುಹಮ್ಮದ್ ಸಖಾಫಿ ಪರವೂರ್ ಮಲಪ್ಪುರಂ, ಹಾಗೂ ಎಸ್ಸೆಸ್ಸೆಫ್ ದ.ಕ. ಜಿಲ್ಲಾ ವೆಸ್ಟ್ ಅಧ್ಯಕ್ಷ ಮುನೀರ್ ಅಹ್ಮದ್ ಕಾಮಿಲ್ ಸಖಾಫಿ ಉಳ್ಳಾಲ, ವಿವಿಧ ವಿಷಯಗಳಲ್ಲಿ ತರಗತಿ ನಡೆಸಿದರು.

ಮುಖ್ಯ ಅತಿಥಿಗಳಾಗಿ ಎಸ್ಸೆಸ್ಸೆಫ್ ದ.ಕ. ಜಿಲ್ಲಾ ವೆಸ್ಟ್ ದಅವಾ ಕಾರ್ಯದರ್ಶಿ ಆರೀಫ್ ಝುಹುರಿ ಮುಕ್ಕ, ಎಸ್ಸೆಸ್ಸೆಫ್ ದ.ಕ. ಜಿಲ್ಲಾ ವೆಸ್ಟ್ ದಅವಾ ಕನ್ವೀನರ್ ಉಮರುಲ್ ಫಾರೂಕ್ ಸಖಾಫಿ ಕಾಟಿಪಳ್ಳ,  ಎಸ್ಸೆಸ್ಸೆಫ್ ದ.ಕ. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೈದರ್ 4ನೇ ಬ್ಲಾಕ್ ಕಾಟಿಪಳ್ಳ, ಎಸ್ಸೆಸ್ಸೆಫ್ ದ.ಕ. ವೆಸ್ಟ್ ಜಿಲ್ಲಾ ಸದಸ್ಯ ರಫೀಕ್ 3ನೇ ಬ್ಲಾಕ್, ಎಸ್ಸೆಸ್ಸೆಫ್ ಸುರತ್ಕಲ್ ಡಿವಿಷನ್ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ತನ್ಸೀರ್ 4ನೇ ಬ್ಲಾಕ್, ಎಸ್ಸೆಸ್ಸೆಫ್ ಸುರತ್ಕಲ್ ಡಿವಿಷನ್ ಫೈನಾನ್ಸ್ ಸೆಕ್ರೆಟರಿ ತೌಸೀಫ್ ಬದ್ರಿಯ ನಗರ ಹಾಗೂ ಎಸ್ಸೆಸ್ಸೆಫ್ ಸುರತ್ಕಲ್ ಡಿವಿಷನ್ ಕಾರ್ಯಕಾರಿಣಿ ಸಮಿತಿ ಸದಸ್ಯರೂ ಉಪಸ್ಥಿತರಿದ್ದರು.

ಎಸ್ಸೆಸ್ಸೆಫ್ ಸುರತ್ಕಲ್ ಡಿವಿಷನ್  ದಅವಾ ಕಾರ್ಯದರ್ಶಿ ಮುಹಮ್ಮದ್ ಸಿನಾನ್ ಸಖಾಫಿ 3ನೇ ಬ್ಲಾಕ್ ಸ್ವಾಗತಿಸಿ,  ಎಸ್ಸೆಸ್ಸೆಫ್ ಸುರತ್ಕಲ್ ಡಿವಿಷನ್ ದಅವಾ ಕನ್ವೀನರ್ ರವೂಫ್ ಹಿಮಮಿ ಹಳೆಯಂಗಡಿ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News