ಮೂರು ತಿಂಗಳ ಅವಧಿಯ ವಿದ್ಯುತ್ ಮತ್ತು ನೀರಿನ ಬಿಲ್ಲ ಮನ್ನಾ ಮಾಡಲು ಆಗ್ರಹಿಸಿ ಡಿವೈಎಫ್‌ಐ ಪ್ರತಿಭಟನೆ

Update: 2021-06-22 14:07 GMT

ಮಂಗಳೂರು, ಜೂ.22: ಕೊರೋನ ಎರಡನೇ ಅಲೆಯ ಹಿನ್ನಲೆಯಲ್ಲಿ ಸರಕಾರ ಘೋಷಿಸಿದ್ದ ಲಾಕ್‌ಡೌನ್‌ನಿಂದಾಗಿ ಜನರು ಉದ್ಯೋಗ ಇಲ್ಲದೆ ಅನ್ನ, ನೀರಿಗೂ ಪರಿತಪಿಸುವ ಸ್ಥಿತಿ ನಿರ್ಮಾಣವಾಗಿದೆ. ಸರಕಾರದ ಲಾಕ್‌ಡೌನ್ ಅವಧಿಯಲ್ಲಿ ಜನರಿಗೆ ಅನ್ನ ಕೊಡಲಿಲ್ಲ, ಅಕ್ಕಿ ಕೊಡಲಿಲ್ಲ, ಬೇಳೆ ಕೊಡಲಿಲ್ಲ, ಮಕ್ಕಳ ಶಾಲಾ ಶುಲ್ಕ ಕೂಡ ಕೊಡಲಿಲ್ಲ, ಬ್ಯಾಂಕಿಗೆ ಕಟ್ಟಬೇಕಾದ ಸಾಲದ ಕಂತನ್ನು ಬಿಡದೆ ವಸೂಲಿ ಮಾಡಿದಿರಿ. ಈಗ ಕನಿಷ್ಟ ಮೂರು ತಿಂಗಳ ಅವಧಿಯ ವಿದ್ಯುತ್ ಮತ್ತು ನೀರಿನ ಬಿಲ್ಲನ್ನು ಮನ್ನಾ ಮಾಡಬೇಕು ಎಂದು ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಆಗ್ರಹಿಸಿದ್ದಾರೆ.

ವಿದ್ಯುತ್ ದರ ಏರಿಕೆಯನ್ನು ವಿರೋಧಿಸಿ ಹಾಗೂ ಮೂರು ತಿಂಗಳ ಅವಧಿಯ ವಿದ್ಯುತ್ ಬಿಲ್ಲ ಮನ್ನಾ ಮಾಡಬೇಕು ಎಂದು ಆಗ್ರಹಿಸಿ ಡಿವೈಎಫ್‌ಐ ರಾಜ್ಯಾದ್ಯಂತ ‘ಕತ್ತಲೆಯತ್ತ ಕರ್ನಾಟಕ’ ಘೋಷಣೆಯಡಿ ಹಮ್ಮಿಕೊಂಡ ಪ್ರತಿಭಟನೆಯ ಭಾಗವಾಗಿ ಸೋಮವಾರ ರಾತ್ರಿ ಕುಳಾಯಿಯಲ್ಲಿ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಡಿವೈಎಫ್‌ಐ ಕಾರ್ಯಕರ್ತರು ಮಂಗಳೂರು, ಉಳ್ಳಾಲ, ಬಂಟ್ವಾಳ, ಪುತ್ತೂರು, ಮೂಡುಬಿದಿರೆ, ಬೆಳ್ತಂಗಡಿ ಸಹಿತ ಸುಮಾರು 50 ಕಡೆಗಳಲ್ಲಿ ದೊಂದಿ, ಲ್ಯಾಟೀನ್, ಚಿಮಣಿ, ದೀವಟಿಗೆ ಮುಂತಾದ ಹಳೆ ಪರಿಕರಗಳನ್ನು ಪ್ರದರ್ಶಿಸಿ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಡಿವೈಎಫ್‌ಐ ದ.ಕ. ಜಿಲ್ಲಾಧ್ಯಕ್ಷ ಬಿ.ಕೆ. ಇಮ್ತಿಯಾಝ್, ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್, ಜಿಲ್ಲಾ ಮುಖಂಡರಾದ ಅಶ್ರಫ್ ಕೆ.ಸಿ.ರೋಡ್, ಜೀವನ್ ರಾಜ್ ಕುತ್ತಾರ್, ನಿತಿನ್ ಕುತ್ತಾರ್, ಸುನಿಲ್ ತೇವುಲ, ರಫೀಕ್ ಹರೇಕಳ, ಸಾದಿಕ್ ಕಣ್ಣೂರು, ನವೀನ್ ಕೊಂಚಾಡಿ, ನೌಶಾದ್ ಬೆಂಗರೆ, ಶ್ರೀನಾಥ್ ಕಾಟಿಪಳ್ಳ, ತುಳಸಿದಾಸ್ ವಿಟ್ಲ, ಆಶಾ ಬೋಳೂರು, ಮನೋಜ್ ವಾಮಂಜೂರು, ರಝಾಕ್,ಬಾರಿಕ್ ಮುಕ್ವೆ, ಸಫ್ವಾನ್ ಮುಕ್ವೆ, ದೀಪಕ್ ಬಜಾಲ್, ಜಗದೀಶ್ ಬಜಾಲ್, ದೀರಾಜ್ ಬಜಾಲ್, ಪ್ರಶಾಂತ್ ಎಂ.ಬಿ. ಉರ್ವಸ್ಟೋರ್, ಸುಕೇಶ್ ಉರ್ವಸ್ಟೊರ್, ಮನೋಜ್ ಉರ್ವಸ್ಟೋರ್, ಚರಣ್ ಶೆಟ್ಟಿ ಪಂಜಿಮೊಗರು, ಸಂತೋಷ್ ಡಿಸೋಜ, ಅನಿಲ್, ಬಾವು, ಕಲೀಲ್, ಅಭಿಷೇಕ್ ಜಪ್ಪಿನಮೊಗರು, ದಿನೇಶ್ ಶೆಟ್ಟಿ, ಹನೀಫ್ ಬೆಂಗರೆ, ಬಿಲಾಲ್ ಬೆಂಗರೆ, ರಿಝ್ವಿನ್, ಸಾಲಿ ವಿಟ್ಲ, ಸುಜಿತ್ ಬೆಳ್ತಂಗಡಿ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News