ಪ್ರೀತಿಗೆ ವಿರೋಧ: ಪ್ರೇಮಿಗಳನ್ನು ಕಲ್ಲಿನಿಂದ ಹೊಡೆದು ಕೊಲೆಗೈದ ಯುವತಿಯ ತಂದೆ

Update: 2021-06-22 15:08 GMT

ವಿಜಯಪುರ, ಜೂ.22: ಪ್ರೇಮಿಗಳಿಬ್ಬರನ್ನು ಯುವತಿಯ ತಂದೆ ಕಲ್ಲಿನಿಂದ ಹೊಡೆದು ಕೊಲೆಗೈದಿರುವ ಘಟನೆ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಸಲಾದಹಳ್ಳಿಯಲ್ಲಿ ಮಂಗಳವಾರ ಸಂಜೆ ನಡೆದಿದೆ.

ಗ್ರಾಮದ ನಿವಾಸಿ ಬಸವರಾಜ ಬಡಿಗೇರಿ(19) ಹಾಗೂ ಖಾನಾಪುರ ಗ್ರಾಮದ ನಿವಾಸಿ ದಾವಲನಿ ತಂಬಡ ಕೊಲೆಯಾದವರು.

ಸಲಾದಹಳ್ಳಿ ಹಾಗೂ ಖಾನಾಪುರ ಅಕ್ಕಪಕ್ಕದ ಗ್ರಾಮಗಳಾಗಿದ್ದರಿಂದ ಬಸವರಾಜ ಹಾಗೂ ದಾವಲನಿ ನಡುವೆ ಪರಿಚಯ ಉಂಟಾಗಿತ್ತು.‌ ಇವರ ಪರಿಚಯ ಪ್ರೀತಿಗೆ ತಿರುಗಿದ್ದು, ಆದರೆ ಇವರಿಬ್ಬರ ಪ್ರೀತಿಗೆ ಯುವತಿಯ ಮನೆಯಲ್ಲಿ ವಿರೋಧವಿತ್ತು ಎನ್ನಲಾಗಿದೆ.

ಇಂದು ಇಬ್ಬರು ಜಮೀನಿನಲ್ಲಿ ಭೇಟಿಯಾದ ವೇಳೆ ದಾವಲನಿಯ ತಂದೆ ಇಬ್ಬರನ್ನೂ ಕಲ್ಲಿನಿಂದ ಜಜ್ಜಿ ಕೊಲೆಗೈದಿದ್ದಾರೆ ಎಂದು ತಿಳಿದುಬಂದಿದೆ.

ಘಟನೆ ಸಂಬಂಧ ಕಲಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News