ಪೋಷಕರು ಬೈಕ್ ಕೊಡಿಸಲಿಲ್ಲ ಎಂಬ ಕಾರಣಕ್ಕೆ ಸಾಫ್ಟ್‌ವೇರ್ ಇಂಜಿನಿಯರ್ ಆತ್ಮಹತ್ಯೆ

Update: 2021-06-22 16:33 GMT

ಮೈಸೂರು, ಜೂ.22: ಬೈಕ್ ಕೊಡಿಸಲಿಲ್ಲವೆಂಬ ಕಾರಣಕ್ಕೆ ಸಾಫ್ಟ್ ವೇರ್ ಇಂಜಿನಿಯರೊಬ್ಬರು ನೇಣಿಗೆ ಶರಣಾದ ಘಟನೆ ಕುವೆಂಪು ನಗರದಲ್ಲಿ ನಡೆದಿದೆ.

ಮೃತರನ್ನು ಅಜಯ್ (25)ಎಂದು ಗುರುತಿಸಲಾಗಿದೆ. ಕಳೆದೊಂದು ವರ್ಷದಿಂದ ಇವರು ಬೆಂಗಳೂರಿನ ಕಂಪನಿಯೊಂದರಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಕಳೆದ ಕೆಲವು ತಿಂಗಳುಗಳಿಂದ ವರ್ಕ್ ಫ್ರಂ ಹೋಂ ಪಡೆದು ಮನೆಯಲ್ಲಿಯೇ ಕಾರ್ಯನಿರ್ವಹಿಸುತ್ತಿದ್ದರು. ಇವರು ತನ್ನ ತಂದೆ ತಾಯಿಯ ಜೊತೆ ರಾಯಲ್ ಎನ್ಫೀಲ್ಡ್ ಬೈಕ್ ಖರೀದಿಸಲು ಕೇಳಿಕೊಂಡಿದ್ದರು. ಆದರೆ ಪೋಷಕರು ಸದ್ಯಕ್ಕೆ ಬೇಡ, ಸ್ವಲ್ಪ ದಿನ ಹೋಗಲಿ ಎಂದು ಹೇಳಿದ್ದರು ಎನ್ನಲಾಗಿದೆ.

ಇದರಿಂದ ಮನನೊಂದ ಅಜಯ್ ತಂದೆ- ತಾಯಿ ವಾಕಿಂಗ್ ಹೋದ ವೇಳೆ ಬಾಗಿಲು ಹಾಕಿಕೊಂಡು ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.

ಈ ಸಂಬಂಧ ಕುವೆಂಪು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News