ಬ್ರಾಹ್ಮಣ್ಯದ ಕುರಿತು ಹೇಳಿಕೆ: ಎರಡನೇ ಬಾರಿ ವಿಚಾರಣೆಗೆ ಹಾಜರಾದ ನಟ ಚೇತನ್

Update: 2021-06-22 16:51 GMT

ಬೆಂಗಳೂರು, ಜೂ.22: ಬ್ರಾಹ್ಮಣ್ಯದ ಕುರಿತ ಹೇಳಿಕೆಗೆ ಸಂಬಂಧಿಸಿದಂತೆ ನಟ, ಸಾಮಾಜಿಕ ಕಾರ್ಯಕರ್ತ ಚೇತನ್ ಅವರನ್ನು ಎರಡನೇ ಬಾರಿಗೆ ಪೊಲೀಸರು ವಿಚಾರಣೆಗೊಳಪಡಿಸಿದರು.

ಮಂಗಳವಾರ ಇಲ್ಲಿನ ಬಸವನಗುಡಿ ಪೊಲೀಸ್ ಠಾಣೆಗೆ ಆಗಮಿಸಿದ ಅವರನ್ನು 3 ಗಂಟೆಗಳ ಕಾಲ ವಿಚಾರಣೆ ನಡೆಸಿ, ಅವರ ಹೇಳಿಕೆಗಳನ್ನು ದಾಖಲು ಮಾಡಿಕೊಂಡರು.

ಬ್ರಾಹ್ಮಣರನ್ನು ಅವಹೇಳನ ಮಾಡಿದ್ದಾರೆಂದು ಆರೋಪಿಸಿ ವಿಪ್ರ ಯುವ ವೇದಿಕೆ ಅಧ್ಯಕ್ಷ ಪವನ್‌ ಕುಮಾರ್ ಶರ್ಮಾ ಎಂಬುವರು ನೀಡಿದ್ದ ದೂರಿನ ಮೇರೆಗೆ ಎಫ್‌ಐಆರ್‌ ದಾಖಲಿಸಿಕೊಂಡಿದ್ದ ಪೊಲೀಸರು, ವಿಚಾರಣೆಗೆ ಬರುವಂತೆ ಚೇತನ್‌ ಅವರಿಗೆ ನೋಟಿಸ್ ನೀಡಿದ್ದರು. ಅದರಂತೆ ಎರಡನೆ ಬಾರಿಗೆ ವಿಚಾರಣೆಗೆ ಹಾಜರಾದರು.

ವಿಚಾರಣೆ ಬಳಿಕ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಪೊಲೀಸ್ ಇಲಾಖೆ ಮೇಲೆ ನನಗೆ ನಂಬಿಕೆ ಇದೆ. ನ್ಯಾಯಯುತ ಮೌಲ್ಯಗಳ ಉಳಿಸುವ ಸಲುವಾಗಿ ಹೋರಾಟ ನಡೆಸುತ್ತಿದ್ದು, ಯಾವುದೇ ಜಾತಿ, ಧರ್ಮವನ್ನು ಗುರಿಯಾಗಿಸಿಕೊಂಡು ಹೇಳಿಕೆ ನೀಡಿಲ್ಲ ಎಂದು ಪುನರುಚ್ಚಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News