ವಾಕಿಂಗ್‌ಗೆಂದು ತೆರಳಿದ್ದ ನಿವೃತ್ತ ಪೊಲೀಸ್ ಅಧಿಕಾರಿಯ ಮೃತದೇಹ ನದಿಯಲ್ಲಿ ಪತ್ತೆ

Update: 2021-06-22 17:03 GMT

ಶಿವಮೊಗ್ಗ,ಜೂ.22: ವಾಕಿಂಗ್‌ಗೆ ತೆರಳಿದ್ದ ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರು ತುಂಗಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ತುಂಗಾ ನದಿ ಸೇತುವೆ ಬಳಿ ಅವರ ಮೃತದೇಹ ಪತ್ತೆಯಾಗಿದೆ.

ನಿವೃತ್ತ ಎಎಸ್‌ಐ ಮುಷ್ತಾಕ್ ಅಹಮದ್ (72) ಮೃತರು. ಇವರು ಸೋಮವಾರ ಬೆಳಗ್ಗೆ ವಾಕಿಂಗ್‌ಗೆ ತೆರಳಿದ್ದರು. ಆದರೆ ಬಹು ಹೊತ್ತಿನವರೆಗೆ ಹಿಂತಿರುಗಿರಲಿಲ್ಲ. ಆದ್ದರಿಂದ ಅವರ ಕುಟುಂಬದವರು ಪೊಲೀಸರಿಗೆ ಮಾಹಿತಿ ನೀಡಿದ್ದರು.

ಈ ವೇಳೆಗೆ ತುಂಗಾ ಹೊಳೆಯಲ್ಲಿ ಮೃತದೇಹ ಪತ್ತೆಯಾಗಿದೆ. ಕೂಡಲೇ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಮೇಲೆತ್ತಿದ್ದಾರೆ. ಅದು ಮುಷ್ತಾಕ್ ಅಹಮದ್ ಅವರದ್ದು ಎಂದು ಖಚಿತವಾಗಿದೆ.

ಮುಷ್ತಾಕ್ ಅಹಮದ್ ಅವರು ಮೂಲತಃ ಬೆಳಗಾವಿ ಜಿಲ್ಲೆಯವರಾಗಿದ್ದು, ಶಿವಮೊಗ್ಗದ ಸೀಗೆಹಟ್ಟಿಯಲ್ಲಿರುವ ತಮ್ಮ ಪತ್ನಿಯ ಮನೆಯಲ್ಲಿ ವಾಸವಿದ್ದರು. ಘಟನೆ ಸಂಬಂಧ ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News