ಉಡುಪಿ: ಜೂ.24,25ರಂದು ಗ್ರಾಪಂ ಮಟ್ಟದಲ್ಲಿ ವಿಮಾ ಶಿಬಿರ

Update: 2021-06-22 17:48 GMT

ಉಡುಪಿ, ಜೂ.22: ಸರಕಾರದ ನಿರ್ದೇಶನದಂತೆ ಜೂ.20ರಿಂದ 30ರವರೆಗೆ ವಿಮಾ ಸಪ್ತಾಹವನ್ನು ಆಚರಿಸಲಾಗುತ್ತಿದೆ. ಇದರಲ್ಲಿ ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆ ಹಾಗೂ ಪ್ರಧಾನ ಮಂತ್ರಿ ಜೀವನಜ್ಯೋತಿ ವಿಮಾ ಯೋಜನೆಗಳನ್ನು ಸಂಜೀವಿನಿ ಹಾಗೂ ಇತರೆ ಎಲ್ಲಾ ಸ್ವಸಹಾಯ ಗುಂಪುಗಳ ಸದಸ್ಯರಿಗೆ, ಉದ್ಯೋಗ ಖಾತರಿ ಯೋಜನೆ ಕೂಲಿಕಾರರಿಗೆ, ಸ್ವಚ್ಛತಾ ಕಾರ್ಯಕರ್ತರಿಗೆ ಹಾಗೂ ಅದರ ಫಲಾನುಭವಿಗಳಿಗೆ ವಿಮೆ ಮಾಡಿಸಲು ಉದ್ದೇಶಿಸಲಾಗಿದೆ.

ಈ ಸಪ್ತಾಹದ ಅಂಗವಾಗಿ ಇದೇ ಜೂ.24 ಮತ್ತು 25ರಂದು ಜಿಲ್ಲೆಯ ಗ್ರಾಪಂಗಳ ವ್ಯಾಪ್ತಿಯಲ್ಲಿ ಗ್ರಾಮಪಂಚಾಯತ್ ಹಾಗೂ ಬ್ಯಾಂಕ್‌ಗಳ ಸಹಯೋಗದಲ್ಲಿ ಸ್ಥಳದಲ್ಲೇ ವಿಮೆ ಮಾಡಿಸುವ ಶಿಬಿರವನ್ನು ಆಯೋಜಿಸಲು ತಿಳಿಸಲಾಗಿದೆ. ಸಾರ್ವಜನಿಕರು ಆಯಾ ಗ್ರಾಪಂಗಳನ್ನು ಸಂಪರ್ಕಿಸಿ ಈ ಶಿಬಿರಗಳ ಸದುಪಯೋಗ ಪಡೆದುಕೊಳ್ಳುವಂತೆ ಉಡುಪಿ ಜಿಪಂನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News