ಮಂಡ್ಯದಲ್ಲಿ ಎತ್ತಿನಬಂಡಿ ಸ್ಪರ್ಧೆ ಪ್ರಶ್ನಿಸಿ ಅರ್ಜಿ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್

Update: 2021-06-22 17:58 GMT

ಬೆಂಗಳೂರು, ಜೂ.22: ಮಂಡ್ಯದಲ್ಲಿ ನಡೆಯುತ್ತಿರುವ ಎತ್ತಿನಬಂಡಿ ಸ್ಪರ್ಧೆಯು ನ್ಯಾಯಾಲಯದ ತೀರ್ಪಿನ ಆಶಯಗಳಿಗೆ ಅನುಗುಣವಾಗಿಲ್ಲ ಎಂದು ಸಲ್ಲಿಸಿದ್ದ ಅರ್ಜಿ ಸಂಬಂಧ ಹೈಕೋರ್ಟ್ ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.

ಈ ಕುರಿತು ಮೈಸೂರಿನ ಪೀಪಲ್ ಫಾರ್ ಅನಿಮಲ್ಸ್ ಸಂಸ್ಥೆಯು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಈ ನೋಟಿಸ್ ಜಾರಿಗೊಳಿಸಿದೆ.

ಸುಪ್ರೀಂಕೋರ್ಟ್ ತೀರ್ಪು ಉಲ್ಲಂಘಿಸಿ ಎತ್ತಿನಬಂಡಿ ಸ್ಪರ್ಧೆ ನಡೆಸಲಾಗುತ್ತಿದೆ. ಜಲ್ಲಿಕಟ್ಟು ಸ್ಪರ್ಧೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಈ ವಿಚಾರದಲ್ಲಿಯೂ ಅನ್ವಯವಾಗುತ್ತದೆ. ಮಂಡ್ಯದಲ್ಲಿ ನಡೆಯುತ್ತಿರುವ ಎತ್ತಿನಬಂಡಿಯಿಂದ ಸುಪ್ರೀಂಕೋರ್ಟ್ ತೀರ್ಪಿನ ಉಲ್ಲಂಘನೆ ಆಗುತ್ತಿದೆಯೇ ಎಂಬ ಬಗ್ಗೆ ಪರಿಶೀಲಿಸಬೇಕಿದೆ ಎಂದು ಹೈಕೋರ್ಟ್ ವಿಭಾಗೀಯ ಪೀಠ ಅಭಿಪ್ರಾಯಪಟ್ಟಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News