ಉಪ್ಪಿನಂಗಡಿಯಲ್ಲಿ ಬಿರುಸಿವ ವ್ಯಾಪಾರ

Update: 2021-06-22 18:46 GMT

ಉಪ್ಪಿನಂಗಡಿ: ಲಾಕ್‍ಡೌನ್ ನಿಯಮಾವಳಿಯ ಗೊಂದಲದ ನಡುವೆ ಮಂಗಳವಾರದಂದು ಉಪ್ಪಿನಂಗಡಿ ಪರಿಸರದಲ್ಲಿ ಬಿರುಸಿನ ವ್ಯಾಪಾರ ವಹಿವಾಟು ನಡೆದವು. 

ಬೀದಿ ಬದಿಯ ವ್ಯಾಪಾರಿಗಳಿಗೆ ವ್ಯಾಪಾರ ನಡೆಸಲು ಅವಕಾಶ ಕಲ್ಪಿಸಿದ ಜಿಲ್ಲಾಡಳಿತದ ನಿಲುವಿನಂತೆ ಹಲವು ದಿನಗಳ ಕಾಲ ಅಂಗಡಿಯಲ್ಲಿ ವ್ಯಾಪಾರ ನಡೆಸಲಾಗದೇ ಜೀನವದಲ್ಲಿ ಸಂಕಷ್ಟ ಎದುರಿಸಿದ್ದ ಬಹುತೇಕ ವ್ಯಾಪಾರಿಗಳು ತಮ್ಮ ತಮ್ಮ ಅಂಗಡಿ ಮುಂಭಾಗದ ಪುಟ್ ಪಾತ್‍ನಲ್ಲಿ ವಸ್ತುಗಳನ್ನಿರಿಸಿ  ಮಾರಾಟ ಮಾಡಿದರು. 

ಜಿಲ್ಲಾ ಉಸ್ತುವಾರಿ ಮಂತ್ರಿಗಳು ದ.ಕ ಜಿಲ್ಲೆಯಲ್ಲೂ ಅನ್ ಲಾಕ್  ಘೋಷಿಸಿ ಮಧ್ಯಾಹ್ನದ ವರೆಗೆ ವ್ಯಾಪಾರ ವಹಿವಾಟು ನಡೆಸಲು ಅವಕಾಶ ಕಲ್ಪಿಸಿರುವುದನ್ನು ಉಪ್ಪಿನಂಗಡಿ ವರ್ತಕ ಸಂಘದ ಅಧ್ಯಕ್ಷ ಪ್ರಶಾಂತ್ ಡಿಕೋಸ್ಟಾ ಸ್ವಾಗತಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News