×
Ad

​ಬೈಂದೂರು ತಾಲೂಕಿನಲ್ಲಿ ಮನೆಗಳಿಗೆ ಹಾನಿ

Update: 2021-06-23 19:01 IST

ಉಡುಪಿ, ಜೂ. 23: ನಿನ್ನೆ ಬೀಸಿದ ಗಾಳಿ-ಮಳೆಗೆ ಬೈಂದೂರು ತಾಲೂಕಿನಲ್ಲಿ ಮೂರು ಮನೆ ಹಾಗೂ ಜಾನುವಾರು ಕೊಟ್ಟಿಗೆಗಳಿಗೆ ಅಪಾರ ಹಾನಿಯಾಗಿದ್ದು ಲಕ್ಷಾಂತರ ರೂ.ಗಳ ನಷ್ಟ ಸಂಭವಿಸಿದೆ.

ಕಂಬದಕೋಣೆ ಗ್ರಾಮದ ಗಣಪಯ್ಯ ಕಾರಂತ ಎಂಬವರ ವಾಸದ ಪಕ್ಕಾ ಮನೆ ಗಾಳಿ-ಮಳೆಯಿಂದ ಭಾಗಶ: ಹಾನಿಯಾಗಿದ್ದು ಸುಮಾರು 50 ಸಾವಿರ ರೂ.ನಷ್ಟದ ಅಂದಾಜು ಮಾಡಲಾಗಿದೆ. ಅದೇ ರೀತಿ ಕಂಬದಕೋಣೆಯ ಚೆಣ್ಣಮ್ಮ ಹಾಗೂ ನಾವುಂದ ಗ್ರಾಮದ ಸುಬ್ಬಣ್ಣ ಶೆಟ್ಟಿ ಎಂಬವರ ಜಾನುವಾರು ಕೊಟ್ಟಿಗೆಗಳಿಗೆ ಸಂಪೂರ್ಣ ಹಾನಿಯಾಗಿದ್ದು, ಕ್ರಮವಾಗಿ 50 ಸಾವಿರ ರೂ. ಹಾಗೂ 25,000ರೂ. ನಷ್ಟದ ಅಂದಾಜು ಮಾಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News