ಫೋನ್ ಕದ್ದಾಲಿಕೆ: ಪ್ರಕರಣ ವಾಪಸ್ ಪಡೆಯದಿರಲು ಶಾಸಕ ಅರವಿಂದ ಬೆಲ್ಲದ್ ನಿರ್ಧಾರ

Update: 2021-06-23 14:42 GMT

ಬೆಂಗಳೂರು, ಜೂ. 23: ಟೆಲಿಫೋನ್ ಕದ್ದಾಲಿಕೆ ಪ್ರಕರಣದ ಕುರಿತು ನಡೆಯುತ್ತಿರುವ ತನಿಖೆಯಿಂದ ಯಾವುದೇ ಸಂದರ್ಭದಲ್ಲಿಯೂ ಹಿಂದೆ ಸರಿಯದಿರಲು ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಅರವಿಂದ್ ಬೆಲ್ಲದ ನಿರ್ಧರಿಸಿದ್ದಾರೆಂದು ಗೊತ್ತಾಗಿದೆ.

ಟೆಲಿಫೋನ್ ಕದ್ದಾಲಿಕೆ ಆಗಿರುವುದರ ಬಗ್ಗೆ ಗೃಹ ಇಲಾಖೆಗೆ ಸಲ್ಲಿಸಿದ್ದ ದೂರಿನನ್ವಯ ತನಿಖೆ ನಡೆಯುತ್ತಿದ್ದು, ಸಂಪೂರ್ಣ ಸಹಕಾರ ನೀಡುತ್ತಿದ್ದೇನೆ. ಆದರೆ, ಕೆಲ ಮಾಧ್ಯಮಗಳಲ್ಲಿ ನಾನು ದೂರು ಹಿಂಪಡೆಯುತ್ತಿದ್ದೇನೆ ಎಂಬ ಸುದ್ದಿಗಳು ಪ್ರಕಟವಾಗುತ್ತಿರುವುದು ಗಮನಿಸಿದ್ದೇನೆ, ಅದು ಸತ್ಯಕ್ಕೆ ದೂರವಾದದ್ದು ಎಂದು ಸ್ಪಷ್ಟನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಟೆಲಿಫೊನ್ ಕದ್ದಾಲಿಕೆ ಬಗ್ಗೆ ಸಂಪೂರ್ಣ ತನಿಖೆಯಾಗಿ ಸತ್ಯ ಹೊರಬರಬೇಕಿದೆ. ಹೀಗಾಗಿ ಯಾವುದೇ ಕಾರಣಕ್ಕೂ ದೂರು ವಾಪಸ್ ಪಡೆಯುವ ಪ್ರಶ್ನೆ ಇಲ್ಲ ಎಂದು ಶಾಸಕ ಅರವಿಂದ ಬೆಲ್ಲದ್ ತಮ್ಮ ಆಪ್ತರ ಬಳಿ ಹೇಳಿಕೊಂಡಿದ್ದಾರೆ ಎಂದು ವಿಶ್ವಾಸನೀಯ ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News