×
Ad

ರಾಜ್ಯಾದ್ಯಂತ 4,436 ಕೊರೋನ ಪ್ರಕರಣಗಳು ದೃಢ: 123 ಮಂದಿ ಮೃತ್ಯು

Update: 2021-06-23 22:32 IST

ಬೆಂಗಳೂರು, ಜೂ.23: ರಾಜ್ಯದಲ್ಲಿ ಬುಧವಾರ 4,436 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. 123 ಜನರು ಸೋಂಕಿಗೆ ಬಲಿಯಾಗಿದ್ದು, 6,455 ಜನರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 28,19,465ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 34,287ಕ್ಕೆ ತಲುಪಿದೆ.

ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 1,16,450ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.

123 ಸೋಂಕಿತರು ಬಲಿ: ಬಳ್ಳಾರಿ 10, ಬೆಳಗಾವಿ 5, ಬೆಂಗಳೂರು ಗ್ರಾಮಾಂತರ 3, ಬೆಂಗಳೂರು ನಗರ 24, ಚಿಕ್ಕಬಳ್ಳಾಪುರ 3, ಚಿಕ್ಕಮಗಳೂರು 2, ಚಿತ್ರದುರ್ಗ 2, ದಕ್ಷಿಣ ಕನ್ನಡ 13, ದಾವಣಗೆರೆ 8, ಧಾರವಾಡ 9, ಹಾಸನ 6, ಕೊಡಗು 1, ಕೋಲಾರ 2, ಮಂಡ್ಯ 3, ಮೈಸೂರು 18, ಶಿವಮೊಗ್ಗ 4, ತುಮಕೂರು 2, ಉಡುಪಿ 4, ಉತ್ತರ ಕನ್ನಡ 2, ವಿಜಯಪುರ ಜಿಲ್ಲೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.

ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 4,436 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ  ಬಳ್ಳಾರಿ 42, ಬೆಳಗಾವಿ 179, ಬೆಂಗಳೂರು ಗ್ರಾಮಾಂತರ 125, ಬೆಂಗಳೂರು ನಗರ 1,008, ಬೀದರ್ 1, ಚಾಮರಾಜನಗರ 89, ಚಿಕ್ಕಬಳ್ಳಾಪುರ 103, ಚಿಕ್ಕಮಗಳೂರು 163, ಚಿತ್ರದುರ್ಗ 57, ದಕ್ಷಿಣ ಕನ್ನಡ 538, ದಾವಣಗೆರೆ 119, ಧಾರವಾಡ 90, ಗದಗ 15, ಹಾಸನ 301, ಹಾವೇರಿ 24, ಕಲಬುರಗಿ 41, ಕೊಡಗು 152, ಕೋಲಾರ 92, ಕೊಪ್ಪಳ 32, ಮಂಡ್ಯ 110, ಮೈಸೂರು 499, ರಾಯಚೂರು 21, ರಾಮನಗರ 26, ಶಿವಮೊಗ್ಗ 219, ತುಮಕೂರು 126, ಉಡುಪಿ 135, ಉತ್ತರ ಕನ್ನಡ 104, ವಿಜಯಪುರ 7, ಯಾದಗಿರಿ  ಜಿಲ್ಲೆಯಲ್ಲಿ 9 ಪ್ರಕರಣಗಳು ಪತ್ತೆಯಾಗಿವೆ.

ರಾಜಧಾನಿಯಲ್ಲಿ 24 ಜನರು ಸಾವು

ರಾಜಧಾನಿಯಲ್ಲಿ ಬುಧವಾರದಂದು 1,008 ಜನರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, 24 ಜನರು ಮೃತಪಟ್ಟಿದ್ದಾರೆ. 1,071 ಸೋಂಕಿತರು ಬಿಡುಗಡೆಯಾಗಿದ್ದಾರೆ.

ನಗರದಲ್ಲಿ ಇಲ್ಲಿಯವರೆಗೆ ಒಟ್ಟು 12,08,104 ಕೊರೋನ ಸೋಂಕಿತರು ದೃಢಪಟ್ಟಿದ್ದು, ಒಟ್ಟು 15,523 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಒಟ್ಟು 11,23,323 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳಲ್ಲಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News