ಮೊಬೈಲ್ ಕರೆ ಕದ್ದಾಲಿಕೆ ಪ್ರಕರಣ: ವಿಚಾರಣೆಗೆ ಗೈರಾದ ಬಿಜೆಪಿ ಶಾಸಕ ಅರವಿಂದ ಬೆಲ್ಲದ್

Update: 2021-06-24 15:11 GMT

ಬೆಂಗಳೂರು, ಜೂ.24:ಮೊಬೈಲ್ ಕರೆ ಕದ್ದಾಲಿಕೆ ಪ್ರಕರಣ ಸಂಬಂಧ ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ವಿಚಾರಣೆಗೆ ಗೈರಾಗಿದ್ದಾರೆ ಎಂದು ತಿಳಿದುಬಂದಿದೆ.

ಗುರುವಾರ ವಿಚಾರಣೆಗೆ ಹಾಜರಾಗುವಂತೆ ನಗರ ಕೇಂದ್ರ ವಿಭಾಗದ ಪೊಲೀಸರು ನೀಡಿದ್ದ ನೋಟಿಸ್‍ಗೆ ಅರವಿಂದ ಬೆಲ್ಲದ್ ಗೈರಾಗಿದ್ದು, ಯಾವುದೇ ರೀತಿಯ ಪ್ರತಿಕ್ರಿಯೆ ನೀಡಿಲ್ಲ ಎನ್ನಲಾಗಿದೆ. 

ವಿಚಾರಣೆಗೆ ಕಾರಣ ನೀಡದೆ ತನಿಖಾಧಿಕಾರಿಗಳ ಮುಂದೆ ಹಾಜರಾಗಿಲ್ಲ. ಅಲ್ಲದೆ, ಕಾಲಾವಕಾಶ ನೀಡುವಂತೆ ಪೊಲೀಸರಿಗೆ ಬೆಲ್ಲದ ಅವಕಾಶ ಕೇಳಿಲ್ಲ ಎಂದು ತಿಳಿದು ಬಂದಿದೆ. ಈ ನಿಟ್ಟಿನಲ್ಲಿ ಮತ್ತೊಂದು ನೋಟಿಸ್ ನೀಡಲು ಪೊಲೀಸರು ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News