ಜೂ.28ರಿಂದ ಮಂಗಳೂರು-ಪುಣೆ, ಉಡುಪಿ-ಹೈದ್ರಾಬಾದ್ ಮಾರ್ಗದ ಬಸ್ಗಳು ಸಂಚಾರ
ಉಡುಪಿ, ಜೂ.25: ಪ್ರಸ್ತುತ ಕೋನಿಡ್-19 ಲಾಕ್ಡೌನ್ ಸಡಿಲಗೊಂಡ ಹಿನ್ನೆಲೆಯಲ್ಲಿ ಕ.ರಾ.ರ.ಸ.ನಿಗಮದ ವತಿಯಿಂದ ಮಂಗಳೂರು-ಪೂನಾ ಮಾರ್ಗದಲ್ಲಿ ಅಂಬಾರಿ ಡ್ರೀಮ್ಕ್ಲಾಸ್ ವೋಲ್ವೋ ಎಸಿ ಸ್ಲೀಪರ್ ಸಾರಿಗೆಯ ಸಂಚಾರವನ್ನು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಜೂ.28ರಿಂದ ಪುನರಾರಂಭಿಸಲಾಗುವುದು.
ಸಂಚಾರ ಸಮಯ: ಅಂಬಾರಿ ಡ್ರೀಮ್ಕ್ಲಾಸ್ ವೋಲ್ವೋ ಎಸಿ ಸ್ಲೀಪರ್ ಸಾರಿಗೆಯು ಸಂಜೆ 4 ಗಂಟೆಗೆ ಮಂಗಳೂರಿನಿಂದ ಹೊರಟು ಉಡುಪಿ, ಮಣಿಪಾಲ, ಕುಂದಾಪುರ, ಕುಮಟ, ಬೆಳಗಾವಿ, ಕರಾಡ, ಸತಾರ ಮಾರ್ಗವಾಗಿ ಮರುದಿನ ಬೆಳಗ್ಗೆ 6 ಗಂಟೆಗೆ ಪುಣೆ ತಲುಪಲಿದೆ. ಮರು ಪ್ರಯಾಣದಲ್ಲಿ ಸಂಜೆ 6:30ಕ್ಕೆ ಪುಣೆಯಿಂದ ಹೊರಟು ಮರುದಿನ ಬೆಳಗ್ಗೆ 7 ಗಂಟೆಗೆ ಮಂಗಳೂರು ತಲುಪಲಿದೆ.
ಉಡುಪಿಯಿಂದ ಹೈದ್ರಾಬಾದ್ಗೆ ಈಗಾಗಲೇ ರಾಜಹಂಸ ಸಾರಿಗೆಗಳನ್ನು ಪ್ರಾರಂಭಿಸಲಾಗಿದ್ದು, ಉಡುಪಿಯಿಂದ ಬೆಳಗ್ಗೆ 11:30ಕ್ಕೆಹೊರಟು ಕುಂದಾಪುರ, ತೀರ್ಥಹಳ್ಳಿ, ಶಿವಮೊಗ್ಗ, ಹೊಸಪೇಟೆ, ರಾಯಚೂರು, ಮೆಹಬೂಬನಗರ ಮಾರ್ಗವಾಗಿ ಮರುದಿನ ಬೆಳಗ್ಗೆ 6 ಗಂಟೆಗೆ ಹೈದ್ರಾಬಾದ್ ತಲುಪಲಿದೆ. ಮರು ಪ್ರಯಾಣದಲ್ಲಿ ಸಂಜೆ 5:45ಕ್ಕೆ ಹೈದ್ರಾಬಾದ್ನಿಂದ ಹೊರಟು ಮರುದಿನ ಬೆಳಗ್ಗೆ 11 ಗಂಟೆಗೆ ಉಡುಪಿ ತಲುಪಲಿದೆ.
ಈ ಸಾರಿಗೆಗಳಲ್ಲಿ ಆನ್ಲೈನ್ ಮುಂಗಡ ಟಿಕೇಟು ಬುಕ್ಕಿಂಗ್ ಸೌಲಭ್ಯಕ್ಕೆ www.ksrtc.in ಮತ್ತು ಹತ್ತಿರದ ರಿಸರ್ವೇಶನ್ ಕೌಂಟರ್ ಅನ್ನು ಸಂಪರ್ಕಿಸುವಂತೆ ಮಂಗಳೂರು ಕ.ರಾ.ರ.ಸಾ.ಸಂ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.