ಕೇಂದ್ರ ಸಚಿವ ಸಂಪುಟದಲ್ಲಿ ರಾಜ್ಯಕ್ಕೆ ಎರಡು ಸ್ಥಾನ ಸಿಗುವ ಸಾಧ್ಯತೆ: ಕೆ.ಎಸ್. ಈಶ್ವರಪ್ಪ

Update: 2021-06-26 12:34 GMT

ಶಿವಮೊಗ್ಗ,ಜೂ.26: ಕೇಂದ್ರ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ರಾಜ್ಯಕ್ಕೆ ಎರಡು ಸಚಿವ ಸ್ಥಾನ ಸಿಗುವ ಸಾಧ್ಯತೆ ಇದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುರೇಶ್ ಅಂಗಡಿಯವರು ಸಚಿವರಾಗಿದ್ದರು. ಅವರ ಸ್ಥಾನ ಈಗ ಖಾಲಿ ಇದೆ. ಕೇಂದ್ರ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ರಾಜ್ಯಕ್ಕೆ ಒಂದು ಅಥವಾ ಎರಡು ಸಚಿವ ಸ್ಥಾನ ನೀಡುವಂತೆ ಮನವಿ ಮಾಡುತ್ತೇವೆ. ಅದಕ್ಕಿಂತ ಮುಂಚಿತವಾಗಿ ಕೇಂದ್ರದ ನಾಯಕರು ಈ ಕುರಿತು ಯೋಚನೆ ಮಾಡಿರುತ್ತಾರೆ ಎಂದರು.

ಸಚಿವ ಯೋಗೇಶ್ವರ್ ದಿಲ್ಲಿ ಭೇಟಿ ವಿಚಾರವಾಗಿ ಮಾತನಾಡಿದ ಅವರು, ದಿಲ್ಲಿಗೆ ಹೋಗಬಾರದು ಎಂದು ಸಂವಿಧಾನದಲ್ಲಿ ಏನಾದರೂ ಬರೆದಿದ್ದಾರೆಯೇ? ಭಾರತೀಯ ಜನತಾ ಪಕ್ಷದ ನಾಯಕರು ದಿಲ್ಲಿಗೆ ಹೋದರೆ ಯಾಕೆ ಈ ಪ್ರಶ್ನೆ ಮಾಡುತ್ತೀರಿ ಎಂದು ಕೇಳಿದರು.

ಮಾಜಿ ಸಚಿವ ರಮೇಶ್ ಜಾರಕಿಹೊಳಿ 'ರಾಜಕೀಯ ನಿವೃತ್ತಿ' ಕುರಿತು ಪ್ರತಿಕ್ರಿಯೆ ನೀಡಿದ ಈಶ್ವರಪ್ಪ, ರಮೇಶ್ ಜಾರಕಿಹೊಳಿ ರಾಜಕೀಯ ನಿವೃತ್ತಿ ಪಡೆಯಲ್ಲ. ಒಂದು ವೇಳೆ ಪಡೆದರೂ ಸಾಯುವವರೆಗೂ ಬಿಜೆಪಿಯಲ್ಲಿಯೇ ಇರುತ್ತೇನೆ ಎಂದಿರುವುದಕ್ಕೆ ಖುಷಿ ಇದೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News