ದಲಿತ ಸಿಎಂ ಕೂಗನ್ನು ದಮನಿಸಿದ ಕಾಂಗ್ರೆಸ್ಗೆ ಅಲ್ಪಸಂಖ್ಯಾತರ ಕೂಗು ಅಡಗಿಸುವುದು ದೊಡ್ಡ ಕೆಲಸವಲ್ಲ: ಬಿಜೆಪಿ ಟೀಕೆ
ಬೆಂಗಳೂರು, ಜೂ.28: ದಲಿತ ನಾಯಕರಿಗೆ ಒಲಿದು ಬಂದಿದ್ದ ಮುಖ್ಯಮಂತ್ರಿ ಸ್ಥಾನವನ್ನು ಕುತಂತ್ರದಿಂದ ಕಾಂಗ್ರೆಸ್ ತಪ್ಪಿಸಿತ್ತು. ಈ ನಡುವೆ ಮುಸ್ಲಿಮರಿಗೂ ಅವಕಾಶ ನೀಡಿ ಎಂದು ಸಿ.ಎಂ. ಇಬ್ರಾಹಿಂ ಹೇಳುತ್ತಿದ್ದಾರೆ. ದಲಿತ ಸಿಎಂ ಕೂಗನ್ನು ದಮನಿಸಿರುವ ಕಾಂಗ್ರೆಸ್ಗೆ ಅಲ್ಪಸಂಖ್ಯಾತರ ಕೂಗನ್ನು ಅಡಗಿಸುವುದು ದೊಡ್ಡ ಕೆಲಸವೇನಲ್ಲ ಎಂದು ರಾಜ್ಯ ಬಿಜೆಪಿ ಟೀಕಿಸಿದೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ಕಾಂಗ್ರೆಸ್ ಪಕ್ಷದಲ್ಲಿ ಅರಾಜಕತೆ ಎಷ್ಟಿದೆ ಎಂದರೆ, ಇರೋದು 68 ಶಾಸಕರು, ಆದರೆ ಮುಖ್ಯಮಂತ್ರಿ ಪದವಿಯ ಆಕಾಂಕ್ಷಿಗಳು ಮಾತ್ರ ನೂರಕ್ಕೂ ಅಧಿಕ!!! ಕಾಂಗ್ರೆಸ್ ಪಕ್ಷದ ಅಧಿಕೃತ ಮೂಲದಿಂದಲೇ ನೂರಕ್ಕೂ ಹೆಚ್ಚು ಜನ ಸಿಎಂ ಕುರ್ಚಿಯ ಆಕಾಂಕ್ಷಿಗಳು ನಮ್ಮಲ್ಲಿದ್ದಾರೆ ಎಂದು ಹೇಳಲಾಗಿತ್ತು. ಅದೀಗ ನಿಜವಾಗುತ್ತಿದೆ! ಎಂದು ವ್ಯಂಗ್ಯವಾಡಿದೆ.
''ಕಾಂಗ್ರೆಸ್ ಪಕ್ಷದೊಳಗಿನ ಒಳಜಗಳ ಈಗ ಮತ್ತೊಂದು ಸ್ವರೂಪ ಪಡೆದುಕೊಂಡಿದೆ. ಸಿದ್ದರಾಮಯ್ಯ ಹಾಗೂ ಡಿಕೆಶಿ ವಿರುದ್ಧ ಮೂಲ ಕಾಂಗ್ರೆಸ್ಸಿಗರು ಒಟ್ಟಾಗುತ್ತಿದ್ದಾರೆ. ಮುನಿಯಪ್ಪ ಅವರ ಮನೆಯಲ್ಲಿ ನಡೆದ ಗೌಪ್ಯ ಸಭೆಯೇ ಅದಕ್ಕೆ ಸಾಕ್ಷಿಯಾಗಿದೆ. ಉಸ್ತುವಾರಿ ಸುರ್ಜೆವಾಲ ಮಾತಿಗೆ ಕವಡೆ ಕಾಸಿನ ಕಿಮ್ಮತ್ತು ಇಲ್ಲದಂತಾಗಿದೆ''
''ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಬಣವಿಲ್ಲ ಎಂದು ಪಂಚತಂತ್ರ ಕತೆ ಹೆಣೆಯುತ್ತಿದ್ದ ಸಿದ್ದರಾಮಯ್ಯ ಅವರೇ, ಮಾಜಿ ಸಚಿವ ಮುನಿಯಪ್ಪ ಅವರ ನಿವಾಸದಲ್ಲಿ ಪರಮೇಶ್ವರ್, ಹರಿಪ್ರಸಾದ್ ಸಭೆ ನಡೆಸಿದ್ದು ಏಕೆ? ಕಾಂಗ್ರೆಸ್ ದೇಶದ ವಿರುದ್ಧ ಟೂಲ್ಕಿಟ್ ಮಾಡುವ ಬದಲು ತನ್ನಲ್ಲಿರುವ ಬಣಗಳ ಟೂಲ್ಕಿಟ್ ತಯಾರಿಸಲಿ''.
''ದುರ್ಬಲ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಅವರಿಗೆ ಈಗ ಸಿದ್ದರಾಮಯ್ಯ ಬೆಂಬಲಿಗರನ್ನು ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲ. ಇದರ ನಡುವೆ ಮೂಲ ಕಾಂಗ್ರೆಸ್ ನಾಯಕರು ಕೂಡಾ ತಮ್ಮ ದಾಳ ಉರುಳಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಈಗ ದಿನಕ್ಕೊಬ್ಬರಂತೆ ಮುಖ್ಯಮಂತ್ರಿ ಆಕಾಂಕ್ಷಿಗಳು ಹುಟ್ಟಿಕೊಳ್ಳುತ್ತಿದ್ದಾರೆ'' ಎಂದು ಬಿಜೆಪಿ ಕುಟುಕಿದೆ.
ಕಾಂಗ್ರೆಸ್ ಪಕ್ಷದಲ್ಲಿ ಅರಾಜಕತೆ ಎಷ್ಟಿದೆ ಎಂದರೆ, ಇರೋದು 68 ಶಾಸಕರು, ಆದರೆ ಮುಖ್ಯಮಂತ್ರಿ ಪದವಿಯ ಆಕಾಂಕ್ಷಿಗಳು ಮಾತ್ರ ನೂರಕ್ಕೂ ಅಧಿಕ!!!@INCKarnataka ಪಕ್ಷದ ಅಧಿಕೃತ ಮೂಲದಿಂದಲೇ ನೂರಕ್ಕೂ ಹೆಚ್ಚು ಜನ ಸಿಎಂ ಕುರ್ಚಿಯ ಆಕಾಂಕ್ಷಿಗಳು ನಮ್ಮಲ್ಲಿದ್ದಾರೆ ಎಂದು ಹೇಳಲಾಗಿತ್ತು.
— BJP Karnataka (@BJP4Karnataka) June 28, 2021
ಅದೀಗ ನಿಜವಾಗುತ್ತಿದೆ!#CONgressVsCONgress pic.twitter.com/0t6Y3yZmlL
ಕಾಂಗ್ರೆಸ್ ಪಕ್ಷದೊಳಗಿನ ಒಳಜಗಳ ಈಗ ಮತ್ತೊಂದು ಸ್ವರೂಪ ಪಡೆದುಕೊಂಡಿದೆ.
— BJP Karnataka (@BJP4Karnataka) June 28, 2021
ಸಿದ್ದರಾಮಯ್ಯ ಹಾಗೂ ಡಿಕೆಶಿ ವಿರುದ್ಧ ಮೂಲ ಕಾಂಗ್ರೆಸ್ಸಿಗರು ಒಟ್ಟಾಗುತ್ತಿದ್ದಾರೆ. ಮುನಿಯಪ್ಪ ಅವರ ಮನೆಯಲ್ಲಿ ನಡೆದ ಗೌಪ್ಯ ಸಭೆಯೇ ಅದಕ್ಕೆ ಸಾಕ್ಷಿಯಾಗಿದೆ.
ಉಸ್ತುವಾರಿ ಸುರ್ಜೆವಾಲ ಮಾತಿಗೆ ಕವಡೆ ಕಾಸಿನ ಕಿಮ್ಮತ್ತು ಇಲ್ಲದಂತಾಗಿದೆ.#CONgressVsCONgress
ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಬಣವಿಲ್ಲ ಎಂದು ಪಂಚತಂತ್ರ ಕತೆ ಹೆಣೆಯುತ್ತಿದ್ದ @siddaramaiah ಅವರೇ,
— BJP Karnataka (@BJP4Karnataka) June 28, 2021
ಮಾಜಿ ಸಚಿವ ಮುನಿಯಪ್ಪ ಅವರ ನಿವಾಸದಲ್ಲಿ ಪರಮೇಶ್ವರ್, ಹರಿಪ್ರಸಾದ್ ಸಭೆ ನಡೆಸಿದ್ದು ಏಕೆ?@INCKarnataka, ದೇಶದ ವಿರುದ್ಧ ಟೂಲ್ಕಿಟ್ ಮಾಡುವ ಬದಲು ತನ್ನಲ್ಲಿರುವ ಬಣಗಳ ಟೂಲ್ಕಿಟ್ ತಯಾರಿಸಿ.#CONgressVsCONgress
ದಲಿತ ನಾಯಕರಿಗೆ ಒಲಿದು ಬಂದಿದ್ದ ಮುಖ್ಯಮಂತ್ರಿ ಸ್ಥಾನವನ್ನು ಕುತಂತ್ರದಿಂದ ಕಾಂಗ್ರೆಸ್ ತಪ್ಪಿಸಿತ್ತು.
— BJP Karnataka (@BJP4Karnataka) June 28, 2021
ಈ ನಡುವೆ ಮುಸ್ಲಿಮರಿಗೂ ಅವಕಾಶ ನೀಡಿ ಎಂದು ಸಿ.ಎಂ. ಇಬ್ರಾಹಿಂ ಹೇಳುತ್ತಿದ್ದಾರೆ.
ದಲಿತ ಸಿಎಂ ಕೂಗನ್ನು ದಮನಿಸಿರುವ ಕಾಂಗ್ರೆಸ್ಗೆ ಅಲ್ಪಸಂಖ್ಯಾತರ ಕೂಗನ್ನು ಅಡಗಿಸುವುದು ದೊಡ್ಡ ಕೆಲಸವೇನಲ್ಲ.#CONgressVsCONgress