ಕೊರೋನದಿಂದ ಮೃತಪಟ್ಟ ಪತ್ರಕರ್ತರ ಕುಟುಂಬಕ್ಕೆ ಪರಿಹಾರ ಮಂಜೂರು ಮಾಡಿದ ಸಿಎಂ ಯಡಿಯೂರಪ್ಪ

Update: 2021-06-28 16:09 GMT

ಬೆಂಗಳೂರು, ಜೂ.28: ಇತ್ತೀಚೆಗೆ ಕೊರೋನದಿಂದ ಮೃತಪಟ್ಟಿದ್ದ ಬಲಿಯಾಗಿದ್ದ ಪಬ್ಲಿಕ್ ಟಿವಿ ಚಿತ್ರದುರ್ಗ ಕ್ಯಾಮರಾಮೆನ್ ಬಸವರಾಜ ಕೋಟಿ ಮತ್ತು ಚನ್ನರಾಯಪಟ್ಟಣ ತಾಲೂಕು ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಮತ್ತು ಹಿರಿಯ ಪತ್ರಕರ್ತ ಸ್ವಾಮಿಗೌಡ ಅವರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರವನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬಿಡುಗಡೆ ಮಾಡಿದ್ದಾರೆ.

ಬಸವರಾಜ ಕೋಟಿ ಅವರಿಗೆ ಪರಿಹಾರ ನೀಡುವಂತೆ ಚಿತ್ರದುರ್ಗ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ, ಸ್ವಾಮಿಗೌಡ ಅವರಿಗೆ ಪರಿಹಾರ ಮಂಜೂರು ಮಾಡುವಂತೆ ಚನ್ನರಾಯಪಟ್ಟಣ ತಾಲೂಕು ಮತ್ತು ಹಾಸನ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘಗಳು ರಾಜ್ಯ ಸಂಘಕ್ಕೆ ಮನವಿ ಮಾಡಿದ್ದವು. ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಮನವಿ ಪರಿಗಣಿಸಿ ಮುಖ್ಯಮಂತ್ರಿ ಯಡಿಯೂರಪ್ಪ ಪರಿಹಾರ ಮಂಜೂರು ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News