ಉಡುಪಿ: ಕೆಎಸ್ಸಾರ್ಟಿಸಿ ಬಸ್‌ಗಳಿಂದಲೇ ಜಿಲ್ಲಾಡಳಿತದ ಆದೇಶ ಉಲ್ಲಂಘನೆ!

Update: 2021-06-28 17:23 GMT

ಉಡುಪಿ, ಜೂ.28: ಕೋವಿಡ್ ನಿಯಮಗಳನ್ನು ಉಲ್ಲಂಘಿಸಿ ಉಡುಪಿಯ ಕೆಎಸ್ಸಾರ್ಟಿಸಿ ಬಸ್‌ಗಳಲ್ಲಿ ಪ್ರಯಾಣಿಕರು ನೇತಾಡಿಕೊಂಡು ಹೋಗುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈಲ್ ಆಗುತ್ತಿದೆ.

ಬಸ್‌ಗಳಲ್ಲಿ ಶೇ.50ರಷ್ಟು ಸೀಟುಗಳನ್ನು ಭರ್ತಿ ಮಾಡಿಕೊಂಡು ಮಾತ್ರ ಪ್ರಯಾಣಿಕರನ್ನು ಕರೆದೊಯ್ಯಬೇಕೆಂಬ ಆದೇಶವನ್ನು ಜಿಲ್ಲಾಡಳಿತ ನೀಡಿತ್ತು. ಆದರೆ ಈ ಆದೇಶವನ್ನು ಸರಕಾರಿ ಬಸ್‌ಗಳೇ ಉಲ್ಲಂಘಿಸುತ್ತಿರುವ ಬಗ್ಗೆ ಸಾರ್ವ ಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.

ಕುಂದಾಪುರದಿಂದ ಉಡುಪಿಗೆ ಹೋಗುವ ಕೆಎಸ್ಸಾರ್ಟಿಸಿ ಬಸ್ ಹಾಗೂ ಉಡುಪಿಯಿಂದ ಶಿವಮೊಗ್ಗಕ್ಕೆ ಹೋಗುವ ಆಗುಂಬೆ ಸಾರಿಗೆ ಬಸ್ ಜನರಿಂದ ತುಂಬಿ ಹೋಗಿದ್ದು, ಸ್ಥಳಾವಕಾಶ ಇಲ್ಲದೆ ಜನ ನೇತಾಡಿಕೊಂಡು ಹೋಗುವ ದೃಶ್ಯ ವಿಡಿಯೋದಲ್ಲಿ ಕಂಡುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News